BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

Published : Feb 24, 2023, 03:16 PM ISTUpdated : Feb 24, 2023, 03:24 PM IST

ಹಲವು ಸಮಸ್ಯೆಗಳ ನಡುವೆಯೇ ಹಾವೇರಿ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳಿಗೆ ಅಪಾಯ ತಲೆ ಮೇಲೆಯೇ ಕಾದು ಕುಳಿತಿದೆ.
 

ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಗೆಜ್ಜಿ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ, ಮಕ್ಕಳು ದಿನ ನಿತ್ಯ ಭಯದಲ್ಲಿಯೇ ಬದುಕುತ್ತಿದ್ದಾರೆ. ಯಮರೂಪಿ ಓವರ್ ಹೆಡ್ ಟ್ಯಾಂಕ್ ಮಕ್ಕಳ ತಲೆ ಮೇಲೆಯೇ ಇದ್ದು, ಯಾವ ಕ್ಷಣದಲ್ಲಾದರೂ ಕುಸಿಯಬಹುದು ಎಂಬ ಆತಂಕ ಮನೆ ಮಾಡಿದೆ. ಶಾಲೆಯ ಆವರಣದಲ್ಲೇ ಇರುವ ಈ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದೆ. ಎಲ್ಲಿ ನೋಡಿದರೂ ಸಿಮೆಂಟ್ ಕಿತ್ತು ಬರುತ್ತಿದೆ. ಟ್ಯಾಂಕ್ ಒಳಗಿರುವ ಕಬ್ಬಿಣದ ರಾಡ್'ಗಳು ಕೂಡಾ ಕಾಣುತ್ತಿದೆ. ಸಿಮೆಂಟ್ ಉದುರಿ ಬೀಳುತ್ತಿದೆ. ಮಕ್ಕಳು ಬ್ರೇಕ್ ಬಿಟ್ಟಾಗ ಆಟ ಆಡೋದೇ ಟ್ಯಾಂಕ್ ಕೆಳಗೆ. ಸಿಮೆಂಟ್ ಉದುರಿ ಮಕ್ಕಳ ತಲೆ ಮೇಲೆ ಬಿದ್ದರೆ ಗತಿ ಏನು ಎಂಬ ಆತಂಕ ಗ್ರಾಮಸ್ಥರದ್ದು.‌ ಸುಮಾರು 25 ವರ್ಷ ಹಳೆಯದಾದ ಟ್ಯಾಂಕ್ ಶಿಥಿಲಾವಸ್ಥೆ ತಲುಪಿ ನಡುಗುತ್ತಿದೆ. ಸುಮಾರು 50 ಲಕ್ಷ ಲೀಟರ್ ನೀರಿನ ಸಾಮರ್ಥ್ಯದ ಈ ಟ್ಯಾಂಕ್ ನಿಂದ ಮನೆ ಮನೆಗೆ ನೀರು ಸರಬರಾಜು ಮಾಡಲಾಗ್ತಿದೆ. ಹಳೆಯದಾದ ಈ ಟ್ಯಾಂಕ್ ಕೆಡವಿ ಮಕ್ಕಳಿಗೆ ಆಟವಾಡಲು ಅನುಕೂಲ ಮಾಡಿಕೊಡಬೇಕು. ಟ್ಯಾಂಕ್ ತೆರವುಗೊಳಿಸಿದರೆ ಸಂಪೂರ್ಣ ಮೈದಾನ ಮಕ್ಕಳಿಗೆ ಆಟವಾಡೋಕೆ ಲಭ್ಯವಾಗಲಿದೆ ಅನ್ನೋದು ಗ್ರಾಮಸ್ಥರ ಬೇಡಿಕೆ ಆಗಿದೆ.

Big3 ಕಲುಷಿತ ನೀರು ಸೇವನೆಯಿಂದ ಮೂರು ಸಾವು: ಅನಪುರದಲ್ಲಿ ಸ್ಮಶಾನ ಮೌನ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more