BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

BIG3 : ಶಾಲೆಯ ಆವರಣದಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್: ಭಯದಲ್ಲಿ ಮಕ್ಕಳ ಓಡಾಟ

Published : Feb 24, 2023, 03:16 PM ISTUpdated : Feb 24, 2023, 03:24 PM IST

ಹಲವು ಸಮಸ್ಯೆಗಳ ನಡುವೆಯೇ ಹಾವೇರಿ ಜಿಲ್ಲೆಯ ಶಾಲೆಯೊಂದರಲ್ಲಿ ಮಕ್ಕಳಿಗೆ ಅಪಾಯ ತಲೆ ಮೇಲೆಯೇ ಕಾದು ಕುಳಿತಿದೆ.
 

ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಗೆಜ್ಜಿ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ  ಶಾಲೆಯಲ್ಲಿ, ಮಕ್ಕಳು ದಿನ ನಿತ್ಯ ಭಯದಲ್ಲಿಯೇ ಬದುಕುತ್ತಿದ್ದಾರೆ. ಯಮರೂಪಿ ಓವರ್ ಹೆಡ್ ಟ್ಯಾಂಕ್ ಮಕ್ಕಳ ತಲೆ ಮೇಲೆಯೇ ಇದ್ದು, ಯಾವ ಕ್ಷಣದಲ್ಲಾದರೂ ಕುಸಿಯಬಹುದು ಎಂಬ ಆತಂಕ ಮನೆ ಮಾಡಿದೆ. ಶಾಲೆಯ ಆವರಣದಲ್ಲೇ ಇರುವ ಈ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದೆ. ಎಲ್ಲಿ ನೋಡಿದರೂ ಸಿಮೆಂಟ್ ಕಿತ್ತು ಬರುತ್ತಿದೆ. ಟ್ಯಾಂಕ್ ಒಳಗಿರುವ ಕಬ್ಬಿಣದ ರಾಡ್'ಗಳು ಕೂಡಾ ಕಾಣುತ್ತಿದೆ. ಸಿಮೆಂಟ್ ಉದುರಿ ಬೀಳುತ್ತಿದೆ. ಮಕ್ಕಳು ಬ್ರೇಕ್ ಬಿಟ್ಟಾಗ ಆಟ ಆಡೋದೇ ಟ್ಯಾಂಕ್ ಕೆಳಗೆ. ಸಿಮೆಂಟ್ ಉದುರಿ ಮಕ್ಕಳ ತಲೆ ಮೇಲೆ ಬಿದ್ದರೆ ಗತಿ ಏನು ಎಂಬ ಆತಂಕ ಗ್ರಾಮಸ್ಥರದ್ದು.‌ ಸುಮಾರು 25 ವರ್ಷ ಹಳೆಯದಾದ ಟ್ಯಾಂಕ್ ಶಿಥಿಲಾವಸ್ಥೆ ತಲುಪಿ ನಡುಗುತ್ತಿದೆ. ಸುಮಾರು 50 ಲಕ್ಷ ಲೀಟರ್ ನೀರಿನ ಸಾಮರ್ಥ್ಯದ ಈ ಟ್ಯಾಂಕ್ ನಿಂದ ಮನೆ ಮನೆಗೆ ನೀರು ಸರಬರಾಜು ಮಾಡಲಾಗ್ತಿದೆ. ಹಳೆಯದಾದ ಈ ಟ್ಯಾಂಕ್ ಕೆಡವಿ ಮಕ್ಕಳಿಗೆ ಆಟವಾಡಲು ಅನುಕೂಲ ಮಾಡಿಕೊಡಬೇಕು. ಟ್ಯಾಂಕ್ ತೆರವುಗೊಳಿಸಿದರೆ ಸಂಪೂರ್ಣ ಮೈದಾನ ಮಕ್ಕಳಿಗೆ ಆಟವಾಡೋಕೆ ಲಭ್ಯವಾಗಲಿದೆ ಅನ್ನೋದು ಗ್ರಾಮಸ್ಥರ ಬೇಡಿಕೆ ಆಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more