Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Published : Jan 21, 2023, 12:26 PM ISTUpdated : Jan 21, 2023, 12:44 PM IST

ರಾಯಚೂರಿನ ಸಿಂಧನೂರಿನಲ್ಲಿ ಹಸಿದವರ ಹೊಟ್ಟೆ ತುಂಬಿಸೋ ಕಾಯಕದಲ್ಲಿ ವ್ಯಕ್ತಿಯೊಬ್ಬರು ನಿರತರಾಗಿದ್ದಾರೆ. ಹಾಗೂ ಮುದ್ದೇಬಿಹಾಳದಲ್ಲಿ ಮಹಿಳೆ ಬಸ್'ನಲ್ಲಿ ಬಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣದ ತುಂಬಿದ್ದ ಬ್ಯಾಗ್ ಹಿಂದಿರುಗಿಸಿ ಸಾರಿಗೆ ಸಿಬ್ಬಂದಿ ಮಾನವೀಯ ಮೆರೆದಿದ್ದಾರೆ.
 

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಅಶೋಕ ನಲ್ಲ ಎಂಬುವವರು ಅನ್ನದಾಸೋಹಕ್ಕೆ ಕೈ ಹಾಕಿದ್ದಾರೆ. ಅಕ್ಷಯ ಆಹಾರ ಜೋಳಿಗೆ ಮಾಡಿಕೊಂಡು ಫೋನ್ ಮಾಡಿದ್ರೆ ಸಾಕು ಅನ್ನ ಉಳಿದ ಸ್ಥಳಕ್ಕೆ ತಮ್ಮ ವಾಹನ ತೆಗೆದುಕೊಂಡು ಹೋಗ್ತಾರೆ. ಕಲ್ಯಾಣ ಮಂಟಪ, ಸಭೆ ಮತ್ತು ಸಮಾರಂಭದಲ್ಲಿ ಉಳಿದ ಆಹಾರವನ್ನು ತೆಗೆದುಕೊಂಡು ಬಡವರು ವಾಸವಾಗಿದ್ದ ಬಡಾವಣೆಗಳಿಗೆ ತೆರಳಿ ಬಡವರಿಗೆ ಅನ್ನ ಹಂಚುತ್ತಾರೆ. ಈ ಸೇವಾ ಕಾಯಕವನ್ನ ಕಳೆದ 8 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇವರ ಜೊತೆ ಖಾಜಾ ಹುಸೇನ್ ದಂಪತಿ ಸಹ ಕೈಜೋಡಿಸಿದ್ದಾರೆ. ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸಾರಿಗೆ ವಿಭಾಗದಲ್ಲಿ ಡ್ರೈವರ್ ಕಂ ಕಂಡೆಕ್ಟರ್ ಆಗಿ ಚೆನ್ನಬಸಪ್ಪ ಪತ್ತೇಪೂರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಸ್'ನಲ್ಲಿ ಮಹಿಳೆಯೊಬ್ಬರು ತಮ್ಮ 3 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ತುಂಬಿದ್ದ ಬ್ಯಾಗನ್ನು ಮರೆತು ಹೋಗಿದ್ದರು. ಅದನ್ನು ಹಿಂದಿರುಗಿಸುವ ಮೂಲಕ ಚೆನ್ನಬಸಪ್ಪ ಪತ್ತೇಪೂರ ಎಲ್ಲರ ಮನ ಗೆದ್ದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more