Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

Published : Jan 21, 2023, 12:26 PM ISTUpdated : Jan 21, 2023, 12:44 PM IST

ರಾಯಚೂರಿನ ಸಿಂಧನೂರಿನಲ್ಲಿ ಹಸಿದವರ ಹೊಟ್ಟೆ ತುಂಬಿಸೋ ಕಾಯಕದಲ್ಲಿ ವ್ಯಕ್ತಿಯೊಬ್ಬರು ನಿರತರಾಗಿದ್ದಾರೆ. ಹಾಗೂ ಮುದ್ದೇಬಿಹಾಳದಲ್ಲಿ ಮಹಿಳೆ ಬಸ್'ನಲ್ಲಿ ಬಿಟ್ಟಿದ್ದ 3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣದ ತುಂಬಿದ್ದ ಬ್ಯಾಗ್ ಹಿಂದಿರುಗಿಸಿ ಸಾರಿಗೆ ಸಿಬ್ಬಂದಿ ಮಾನವೀಯ ಮೆರೆದಿದ್ದಾರೆ.
 

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಅಶೋಕ ನಲ್ಲ ಎಂಬುವವರು ಅನ್ನದಾಸೋಹಕ್ಕೆ ಕೈ ಹಾಕಿದ್ದಾರೆ. ಅಕ್ಷಯ ಆಹಾರ ಜೋಳಿಗೆ ಮಾಡಿಕೊಂಡು ಫೋನ್ ಮಾಡಿದ್ರೆ ಸಾಕು ಅನ್ನ ಉಳಿದ ಸ್ಥಳಕ್ಕೆ ತಮ್ಮ ವಾಹನ ತೆಗೆದುಕೊಂಡು ಹೋಗ್ತಾರೆ. ಕಲ್ಯಾಣ ಮಂಟಪ, ಸಭೆ ಮತ್ತು ಸಮಾರಂಭದಲ್ಲಿ ಉಳಿದ ಆಹಾರವನ್ನು ತೆಗೆದುಕೊಂಡು ಬಡವರು ವಾಸವಾಗಿದ್ದ ಬಡಾವಣೆಗಳಿಗೆ ತೆರಳಿ ಬಡವರಿಗೆ ಅನ್ನ ಹಂಚುತ್ತಾರೆ. ಈ ಸೇವಾ ಕಾಯಕವನ್ನ ಕಳೆದ 8 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಇವರ ಜೊತೆ ಖಾಜಾ ಹುಸೇನ್ ದಂಪತಿ ಸಹ ಕೈಜೋಡಿಸಿದ್ದಾರೆ. ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸಾರಿಗೆ ವಿಭಾಗದಲ್ಲಿ ಡ್ರೈವರ್ ಕಂ ಕಂಡೆಕ್ಟರ್ ಆಗಿ ಚೆನ್ನಬಸಪ್ಪ ಪತ್ತೇಪೂರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಸ್'ನಲ್ಲಿ ಮಹಿಳೆಯೊಬ್ಬರು ತಮ್ಮ 3 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ತುಂಬಿದ್ದ ಬ್ಯಾಗನ್ನು ಮರೆತು ಹೋಗಿದ್ದರು. ಅದನ್ನು ಹಿಂದಿರುಗಿಸುವ ಮೂಲಕ ಚೆನ್ನಬಸಪ್ಪ ಪತ್ತೇಪೂರ ಎಲ್ಲರ ಮನ ಗೆದ್ದಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರದಾನ ಆಗುತ್ತಾ ಹಿಜಾಬ್‌ ವಿವಾದ?

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more