Big3 Impact : ಸುವರ್ಣ ನ್ಯೂಸ್ ಫಲಶ್ರುತಿ: ಹೆರೂರು ಹಾಡಿ ಗ್ರಾಮಕ್ಕೆ ಬಂತು ಬಸ್

Big3 Impact : ಸುವರ್ಣ ನ್ಯೂಸ್ ಫಲಶ್ರುತಿ: ಹೆರೂರು ಹಾಡಿ ಗ್ರಾಮಕ್ಕೆ ಬಂತು ಬಸ್

Published : Feb 09, 2023, 03:03 PM ISTUpdated : Feb 09, 2023, 03:09 PM IST

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲವಾಗಿದ್ದು, ಸುವರ್ಣ ನ್ಯೂಸ್ ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡಿದ್ದು, ಇಂಪ್ಯಾಕ್ಟ್ ಆಗಿದೆ.

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಹೆರೂರು ಹಾಡಿ ಗ್ರಾಮಕ್ಕೆ ಸರಿಯಾದ ಬಸ್ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೊಗದೇ ಮನೆಯಲ್ಲೇ ಉಳಿದಿದ್ದರು. ಈ ಬಗ್ಗೆ  ಸುವರ್ಣ ನ್ಯೂಸ್ ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡಿ ಸಂಬಂಧ ಪಟ್ಟವರ ಗಮನಕ್ಕೆ ತಂದಿತ್ತು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ರಿಂದ 8 ಕಿಲೋ ಮೀಟರ್ ದೂರದಲ್ಲಿರುವ ಬಸವನಹಳ್ಳಿ, ಕಾನ್‍ಬೈಲು ಮತ್ತು ಏಳನೇ ಹೊಸಕೋಟೆ ಶಾಲೆಗಳಿಗೆ ಹೋಗಬೇಕಿತ್ತು.ಇನ್ನೂ ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಬಸ್ಸು ಬಾರದೆ ಹತ್ತಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ಪರಿಸ್ಥಿತಿಯನ್ನು ಬಿಗ್-3 ಯಲ್ಲಿ ವರದಿ ಪ್ರಸಾರ ಮಾಡ್ತಾ ಇದ್ದಂತೆ ಅಧಿಕಾರಿಗಳೆಲ್ಲಾ ಎಚ್ಚೆತ್ತುಕೊಂಡರು. ಸಮಯಕ್ಕೆ ಸರಿಯಾಗಿ ಬಸ್ಸು ಸಂಚರಿಸುವಂತೆ ನೋಡಿಕೊಂಡರು. ಗ್ರಾಮದಲ್ಲಿ ಬಸ್ ಕಂಡು ವಿದ್ಯಾರ್ಥಿಗಳು, ಪೋಷಕರೆಲ್ಲಾ ಸಂತಸಗೊಂಡಿದ್ದಾರೆ. ಸುವರ್ಣ ನ್ಯೂಸ್ ಬಿಗ್-3 ವರದಿಗೆ ಧನ್ಯವಾದ ಕೂಡ ತಿಳಿಸಿದರು.

HD Kumaraswamy: ದಳಪತಿಗೆ ಬ್ರಾಹ್ಮಣ ವಿರೋಧಿ ಹಣೆಪಟ್ಟಿ: ಕುಮಾರಸ್ವಾ ...

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more