ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

ರೇಷನ್ ಕಾರ್ಡ್ ತವರಲ್ಲಿ, ಕೆಲಸ ಉಡುಪಿಯಲ್ಲಿ: 'ಥಂಬ್' ಕೊಡಲಾಗದೇ ಕಾರ್ಮಿಕರ ಗೋಳು!

Published : Sep 10, 2021, 06:08 PM ISTUpdated : Sep 10, 2021, 06:21 PM IST

- ಉಡುಪಿ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಮೂಲದ ಸುಮಾರು 30 ಸಾವಿರ ಕಾರ್ಮಿಕರು

- ಸಾವಿರಾರು ಮಂದಿಯ ರೇಷನ್ ಕಾರ್ಡ್ ಇಂದಿಗೂ ತವರು ಜಿಲ್ಲೆಗಳಲ್ಲೇ ಇದೆ

- ಊರಿಗೆ ಹೋಗಿ ಥಂಬ್‌ ಕೊಡಬೇಕಾದರೆ ಸಾವಿರಾರು ರೂ. ಖರ್ಚು ಮಾಡೋ ಅನಿವಾರ್ಯತೆ 
 

ಉಡುಪಿ (ಸೆ.10):  ಜಿಲ್ಲೆಯಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ, ಹೊರಜಿಲ್ಲೆಗಳಿಂದ ಬಂದು ನೆಲೆಸಿರುವ ಅಸಂಘಟಿತ  ಕಾರ್ಮಿಕರು ಇದ್ದಾರೆ. ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಹುಬ್ಬಳ್ಳಿ, ಗದಗ, ಹಾವೇರಿ, ದಾವಣಗೆರೆ ಮುಂತಾದ ಜಿಲ್ಲೆಗಳ ಕಾರ್ಮಿಕರೇ ಹೆಚ್ಚಾಗಿ ಕೂಲಿ ಕೆಲಸದ ಸಲುವಾಗಿ ಇಲ್ಲಿ ನೆಲೆಸಿದ್ದಾರೆ. ಆದರೆ ಸಾವಿರಾರು ಮಂದಿಯ ರೇಷನ್ ಕಾರ್ಡ್ ಇವತ್ತಿಗೂ ತವರು ಜಿಲ್ಲೆಗಳಲ್ಲೇ ಇದೆ. 

ಕೊರೋನಾ ಕಾಲದಲ್ಲಿ ದುಡಿಮೆಯೂ ಸಿಗದೆ, ಹಣವೂ ಇಲ್ಲದೆ, ಸಿಕ್ಕ ಕೆಲಸ ಕಳೆದುಕೊಳ್ಳಲು ಬಯಸದ ನೂರಾರು ಮಂದಿ ಇವತ್ತಿಗೂ ತಂಬ್ ನೀಡಲು ತವರಿಗೆ ಹೋಗಿಲ್ಲ. ಒಮ್ಮೆ ಊರಿಗೆ ಹೋದರೆ ನಾಲ್ಕೈದು ಸಾವಿರ ರುಪಾಯಿ ಖರ್ಚಾಗುತ್ತೆ,ಅನ್ನೋದು ವಲಸೆ ಕಾರ್ಮಿಕದ ಸಂಕಟ. ಸ್ಥಳೀಯವಾಗಿಯೇ ತಂಬ್ ತೆಗೆದುಕೊಳ್ಳಬೇಕೆಂದು ನ್ಯಾಯಬೆಲೆ ಅಂಗಡಿ ಸುತ್ತಿ, ಈ ವಲಸೆ ಕಾರ್ಮಿಕರು ಸುಸ್ತಾಗಿದ್ದಾರೆ. ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಸ್ವಾಮಿ ಎನ್ನುತ್ತಿದ್ದಾರೆ ಕಾರ್ಮಿಕರು. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!