'ಹೊಲದಲ್ಲಿದ್ದ ಬಾವಿಯೇ ಕಣ್ಮರೆ, ಹುಡುಕಿಕೊಡಿ ರೈತ ದುಂಬಾಲು'

'ಹೊಲದಲ್ಲಿದ್ದ ಬಾವಿಯೇ ಕಣ್ಮರೆ, ಹುಡುಕಿಕೊಡಿ ರೈತ ದುಂಬಾಲು'

Published : Jul 06, 2021, 09:11 PM ISTUpdated : Jul 06, 2021, 09:15 PM IST

* ಭ್ರಷ್ಟಾಚಾರದ ಇನ್ನೊಂದು ಮುಖ ಅನಾವರಣ
* ಬಾವಿ ಕಾಣೆಯಾಗಿದೆ ಎಂದು ದೂರು ತಂದ ಅನ್ನದಾತ
* ನಕಲಿ ನರೇಗಾ ಬಿಲ್ ಮಾಡಿ ಹಣ ಗುಳುಂ ಮಾಡಿದ ಅಧಿಕಾರಿಗಳು
* ಬೆಳಗಾವಿ ಜಿಲ್ಲೆಯ ಪ್ರಕರಣ  ದೊಡ್ಡ ಸುದ್ದಿ

ಬೆಳಗಾವಿ(ಜು.  06)   ಇವರ ಹೆಸರು ಮಲ್ಲಪ್ಪ ಕುಲಗುಡೆ ಅಂತ.  ಮೂಲತಃ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ‌‌ ಭೆಂಡವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಹೊಂಡ ಗ್ರಾಮದ ನಿವಾಸಿ.

ಈ ರೈತನ ಸರ್ವೆ ನಂಬರ್ 21/1 ರಲ್ಲಿ ಸರ್ಕಾರದಿಂದ ಬಾವಿ ತೋಡಲಾಗಿದೆ ಅಂತ ಭೆಂಡವಾಡ ಗ್ರಾಮ ಪಂಚಾಯತ್‌ನಲ್ಲಿ 77 ಸಾವಿರ ರೂಪಾಯಿ ನಕಲಿ ಬಿಲ್ ತೆಗೆದು, ಅಧಿಕಾರಿಗಳು ಆ ಹಣವನ್ನ ತಿಂದು ತೇಗಿದ್ದಾರೆ. ಆದರೆ ಮಲ್ಲಪ್ಪನ ಹೊಲದಲ್ಲಿ ಯಾವುದೇ ಬಾವಿ ತೋಡಲಾಗಿಲ್ಲ. ಇದು ಮಲ್ಲಪ್ಪನ ಗಮನಕ್ಕೆ ಬಂದಿದ್ದು, ಮಲ್ಲಪ್ಪ ಅದಕ್ಕೆ ಸಂಬಧಿಸಿದ ಬಿಲ್ ಹಿಡಿದು ಈಗ ಅಧಿಕಾರಿಗಳಿಗೆ ಬಾವಿ ಹುಡುಕಿಕೊಡಿ ಅಂತ ಮನವಿ ಸಲ್ಲಿಸಿದ್ದಾರೆ.

ಜಮೀನು ವಿವಾದ; ಚಾಮರಾಜನಗರ ಜಿಪಂ ಉಪಾಧ್ಯಕ್ಷೆ ತಂದೆ ಕೊಲೆ

ಅಲ್ಲದೇ ಅದೇ ಗ್ರಾಮದಲ್ಲಿ ಮಲ್ಲಪ್ಪ ರಾಮಪ್ಪ ಕುಲಗುಡೆ ಎಂಬ ಹೆಸರಿನ ಮತ್ತೋರ್ವ ವ್ಯಕ್ತಿ ಇದ್ದು, ಆತನ ಹೆಸರಿನಲ್ಲಿ ಯಾವುದೇ ರೀತಿಯ ಜಮೀನು ಇಲ್ಲ. ಅಲ್ಲದೇ ನಮ್ಮ ಜಮೀನಿನಲ್ಲಿ ಪೂರ್ವಜರ ಕಾಲದಿಂದಲೂ ಬಾವಿ ಇದ್ದು, ಒಂದೇ ಹೆಸರು ಇರುವುದರಿಂದ ಮತ್ತೋರ್ವ ವ್ಯಕ್ತಿ ಮಲ್ಲಪ್ಪ ರಾಮಪ್ಪ ಕುಲಗುಡೆ ಎಂಬುವರ ಹಾಗೂ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬಿಲ್ ತೆಗೆದಿದ್ದಾರೆ. ಆದ್ದರಿಂದ ಪಿಡಿಒ ಸದಾಶಿವ ಕರಿಗಾರ, ಮಲ್ಲಪ್ಪ ಕುಲಗುಡೆ ಹಾಗೂ ಹಾಲಪ್ಪ ರಾಮಪ್ಪ ಕುಲಗುಡೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ಸಲ್ಲಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?