ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಬಿಜೆಪಿ ಬಾಗಿಲು ಬಂದ್? ಲೋಕಸಭೆಗೆ ಮತ್ತೆ ಬಂಡಾಯ ಫಿಕ್ಸ್!

ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಬಿಜೆಪಿ ಬಾಗಿಲು ಬಂದ್? ಲೋಕಸಭೆಗೆ ಮತ್ತೆ ಬಂಡಾಯ ಫಿಕ್ಸ್!

Published : Jan 15, 2024, 03:54 PM IST

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಪುತ್ತಿಲಗೆ ನಿರಾಸೆಯಾಗಿದೆ. ಬಿಜೆಪಿ ಜತೆಗಿನ ಅರುಣ್ ಪುತ್ತಿಲ ಸಂಧಾನದ ಬಾಗಿಲು ಬಂದ್ ಆಗಿದೆ.

ದಕ್ಷಿಣ ಕನ್ನಡ (ಜ.15): ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಪುತ್ತಿಲಗೆ ನಿರಾಸೆಯಾಗಿದೆ. ಬಿಜೆಪಿ ಜತೆಗಿನ ಅರುಣ್ ಪುತ್ತಿಲ ಸಂಧಾನದ ಬಾಗಿಲು ಬಂದ್ ಆಗಿದೆ. ಅರುಣ್ ಪುತ್ತಿಲ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದರು. ಮುನಿಸು ಮರೆತು ಒಂದಾಗಲು ಜಿಲ್ಲಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದರು. ಬಿ.ಎಲ್.ಸಂತೋಷ್ ಸೇರಿ ಹಲವು ನಾಯಕರ ಭೇಟಿ ವೇಳೆ ಡಿಮ್ಯಾಂಡ್ ಮಾಡಿದ್ದರು. ಕಟೀಲ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ಬಳಿಕ ಮತ್ತೆ ಬೇಡಿಕೆ ಸಲ್ಲಿಸಿದ್ದರು. ಈ ಬಗ್ಗೆ ಪುತ್ತಿಲ ಪರಿವಾರದ ಮುಖಂಡರು ವಿಜಯೇಂದ್ರ ಭೇಟಿಯಾಗಿ ಬೇಡಿಕೆ ಇಟ್ಟಿದ್ದರು. ಆದರೂ, ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡದೇ ಪುತ್ತಿಲಗೆ ಕೈ ಕೊಡಲಾಗಿದೆ.

ಇನ್ನು ಅರುಣ್ ಕುಮಾರ್ ಪುತ್ತಿಲ ಅವರು, ಜಿಲ್ಲಾಧ್ಯಕ್ಷ ಸ್ಥಾನ ಸಿಕ್ಕರೆ ಬಂಡಾಯದಿಂದ ಹಿಂದೆ ಸರಿಯೋ ಮಾತು ಹೇಳಿದ್ದರು.ಆದರೆ, ಪುತ್ತಿಲಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಕೆಲ ನಾಯಕರ ವಿರೋಧ ವ್ಯಕ್ತಪಡಿಸಿದ್ದರು. ಪುತ್ತಿಲಗೆ ಸ್ಥಾನಮಾನ ನೀಡಲು ಭಾರೀ ಸ್ಥಳೀಯರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಿಗೆ ಜಿಲ್ಲಾಧ್ಯಕ್ಷ ಸ್ಥಾನ ಕೊಡಿ. ಖಾದರ್ ವಿರುದ್ಧ ಸ್ಪರ್ಧಿಸಿದ್ದ ಸತೀಶ್ ಕುಂಪಲಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವಂತೆ ತಿಳಿಸಿದ್ದರು. ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ಪುತ್ತಿಲ  ಬಂಡಾಯವೆದಿದ್ದರು. ಈ ವೇಳೆ ಪುತ್ತಿಲ ಪರಿವಾರ ಎರಡೂ ಸ್ಥಾನಗಳನ್ನೂ ಸೋತಿದ್ದರು. ಆದ್ದರಿಂದ ಪುತ್ತಿಲ ಜಿಲ್ಲಾಧ್ಯಕ್ಷ ಬೇಡಿಕೆಯನ್ನು ಬಿಜೆಪಿ ವರಿಷ್ಠರು ನಿರ್ಲಕ್ಷ್ಯ ಮಾಡಿದ್ದಾರೆ. ಅರುಣ್ ಪುತ್ತಿಲ ವಿರುದ್ಧ ಮತ್ತೆ ಡೋಂಟ್ ಕೇರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ.

ಶಿವಮೊಗ್ಗದ ಅಭಿವೃದ್ಧಿಗೆ ಕೇಂದ್ರ ಕೊಟ್ಟ ಅನುದಾನ ವಾಪಸಾತಿಗೆ ಪತ್ರ ಬರೆದ ರಾಜ್ಯ ಸರ್ಕಾರ!

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಬಂಡಾಯ ಫಿಕ್ಸ್ ಆಗಿದೆ. ಪುತ್ತಿಲ ಬಂಡಾಯವೆದ್ದರೂ ಸೈಲೆಂಟ್ ಆಗಿರಲು ಬಿಜೆಪಿ ನಿರ್ಧಾರ ಮಾಡಿದೆ. ಪುತ್ತಿಲ ಜತೆ ಸಂಧಾನ ಮಾತುಕತೆ ನಡೆಸದಿರಲು ಬಿಜೆಪಿ ತೀರ್ಮಾನಿಸಿದೆ. ಅರುಣ್ ಪುತ್ತಿಲಗೆ ಬಿಜೆಪಿ ಜೊತೆಗಿನ ಎಲ್ಲಾ ಬಾಗಿಲುಗಳು ಬಂದ್ ಆಗಿವೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more