ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಬಿಜೆಪಿ ಬಾಗಿಲು ಬಂದ್? ಲೋಕಸಭೆಗೆ ಮತ್ತೆ ಬಂಡಾಯ ಫಿಕ್ಸ್!

ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಬಿಜೆಪಿ ಬಾಗಿಲು ಬಂದ್? ಲೋಕಸಭೆಗೆ ಮತ್ತೆ ಬಂಡಾಯ ಫಿಕ್ಸ್!

Published : Jan 15, 2024, 03:54 PM IST

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಪುತ್ತಿಲಗೆ ನಿರಾಸೆಯಾಗಿದೆ. ಬಿಜೆಪಿ ಜತೆಗಿನ ಅರುಣ್ ಪುತ್ತಿಲ ಸಂಧಾನದ ಬಾಗಿಲು ಬಂದ್ ಆಗಿದೆ.

ದಕ್ಷಿಣ ಕನ್ನಡ (ಜ.15): ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಪುತ್ತಿಲಗೆ ನಿರಾಸೆಯಾಗಿದೆ. ಬಿಜೆಪಿ ಜತೆಗಿನ ಅರುಣ್ ಪುತ್ತಿಲ ಸಂಧಾನದ ಬಾಗಿಲು ಬಂದ್ ಆಗಿದೆ. ಅರುಣ್ ಪುತ್ತಿಲ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದರು. ಮುನಿಸು ಮರೆತು ಒಂದಾಗಲು ಜಿಲ್ಲಾಧ್ಯಕ್ಷ ಸ್ಥಾನದ ಬೇಡಿಕೆ ಇಟ್ಟಿದ್ದರು. ಬಿ.ಎಲ್.ಸಂತೋಷ್ ಸೇರಿ ಹಲವು ನಾಯಕರ ಭೇಟಿ ವೇಳೆ ಡಿಮ್ಯಾಂಡ್ ಮಾಡಿದ್ದರು. ಕಟೀಲ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ಬಳಿಕ ಮತ್ತೆ ಬೇಡಿಕೆ ಸಲ್ಲಿಸಿದ್ದರು. ಈ ಬಗ್ಗೆ ಪುತ್ತಿಲ ಪರಿವಾರದ ಮುಖಂಡರು ವಿಜಯೇಂದ್ರ ಭೇಟಿಯಾಗಿ ಬೇಡಿಕೆ ಇಟ್ಟಿದ್ದರು. ಆದರೂ, ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡದೇ ಪುತ್ತಿಲಗೆ ಕೈ ಕೊಡಲಾಗಿದೆ.

ಇನ್ನು ಅರುಣ್ ಕುಮಾರ್ ಪುತ್ತಿಲ ಅವರು, ಜಿಲ್ಲಾಧ್ಯಕ್ಷ ಸ್ಥಾನ ಸಿಕ್ಕರೆ ಬಂಡಾಯದಿಂದ ಹಿಂದೆ ಸರಿಯೋ ಮಾತು ಹೇಳಿದ್ದರು.ಆದರೆ, ಪುತ್ತಿಲಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಕೆಲ ನಾಯಕರ ವಿರೋಧ ವ್ಯಕ್ತಪಡಿಸಿದ್ದರು. ಪುತ್ತಿಲಗೆ ಸ್ಥಾನಮಾನ ನೀಡಲು ಭಾರೀ ಸ್ಥಳೀಯರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಿಗೆ ಜಿಲ್ಲಾಧ್ಯಕ್ಷ ಸ್ಥಾನ ಕೊಡಿ. ಖಾದರ್ ವಿರುದ್ಧ ಸ್ಪರ್ಧಿಸಿದ್ದ ಸತೀಶ್ ಕುಂಪಲಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡುವಂತೆ ತಿಳಿಸಿದ್ದರು. ಪುತ್ತೂರು ನಗರಸಭೆ ಉಪಚುನಾವಣೆಯಲ್ಲಿ ಪುತ್ತಿಲ  ಬಂಡಾಯವೆದಿದ್ದರು. ಈ ವೇಳೆ ಪುತ್ತಿಲ ಪರಿವಾರ ಎರಡೂ ಸ್ಥಾನಗಳನ್ನೂ ಸೋತಿದ್ದರು. ಆದ್ದರಿಂದ ಪುತ್ತಿಲ ಜಿಲ್ಲಾಧ್ಯಕ್ಷ ಬೇಡಿಕೆಯನ್ನು ಬಿಜೆಪಿ ವರಿಷ್ಠರು ನಿರ್ಲಕ್ಷ್ಯ ಮಾಡಿದ್ದಾರೆ. ಅರುಣ್ ಪುತ್ತಿಲ ವಿರುದ್ಧ ಮತ್ತೆ ಡೋಂಟ್ ಕೇರ್ ಅಸ್ತ್ರ ಪ್ರಯೋಗ ಮಾಡಿದ್ದಾರೆ.

ಶಿವಮೊಗ್ಗದ ಅಭಿವೃದ್ಧಿಗೆ ಕೇಂದ್ರ ಕೊಟ್ಟ ಅನುದಾನ ವಾಪಸಾತಿಗೆ ಪತ್ರ ಬರೆದ ರಾಜ್ಯ ಸರ್ಕಾರ!

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಬಂಡಾಯ ಫಿಕ್ಸ್ ಆಗಿದೆ. ಪುತ್ತಿಲ ಬಂಡಾಯವೆದ್ದರೂ ಸೈಲೆಂಟ್ ಆಗಿರಲು ಬಿಜೆಪಿ ನಿರ್ಧಾರ ಮಾಡಿದೆ. ಪುತ್ತಿಲ ಜತೆ ಸಂಧಾನ ಮಾತುಕತೆ ನಡೆಸದಿರಲು ಬಿಜೆಪಿ ತೀರ್ಮಾನಿಸಿದೆ. ಅರುಣ್ ಪುತ್ತಿಲಗೆ ಬಿಜೆಪಿ ಜೊತೆಗಿನ ಎಲ್ಲಾ ಬಾಗಿಲುಗಳು ಬಂದ್ ಆಗಿವೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more