ಪೌರತ್ವ ಕಾಯ್ದೆಗೆ ಬೆಂಬಲ: ಗಂಗಾವತಿಯಲ್ಲಿ ಬಿಜೆಪಿಯಿಂದ ಜನ ಜಾಗೃತಿ ಅಭಿಯಾನ

Jan 20, 2020, 12:49 PM IST

ಕೊಪ್ಪಳ(ಜ.20): ಪೌರತ್ವ ಕಾಯ್ದೆ ಕುರಿತು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಬಿಜೆಪಿ ನಾಯಕರು ಇಂದು(ಸೋಮವಾರ) ಜನ ಜಾಗೃತಿ ‌ಅಭಿಯಾನ ನಡೆಸಿದ್ದಾರೆ. ಜಿಲ್ಲಾ ಬಿಜೆಪಿ ನಾಯಕರು ಗಂಗಾವತಿ ನಗರದ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ.

ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯುತ್ತಿದೆ. ಗಂಗಾವತಿಯ ಜಯನಗರದ ಬಡಾವಣೆಯ ಮನೆ ಮನೆಗೆ ತೆರಳಿ ಶಾಸಕ ಪರಣ್ಣ ಮುನವಳ್ಳಿ ಜಾಗೃತಿ ಮೂಡಿಸುತ್ತಿದ್ದಾರೆ. ಶಾಸಕ ಪರಣ್ಣ ಮುನವಳ್ಳಿಗೆ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ಬಿಜೆಪಿಯವರು ಪೌರತ್ವ ಕಾಯ್ದೆ ಕುರಿತು ಜನರಿಗೆ ಜಾಗೃತಿ ಮೂಡಿಸುತ್ತಿದ್ದರೆ, ವಿರೋಧ ಪಕ್ಷಗಳು ಮಾತ್ರ ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ.