ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

Published : Apr 20, 2022, 01:21 PM IST

*ಮಂತ್ರಿ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷೀಯರಿಂದಲೇ ಅಸಮಾಧಾನ
*ಸಂಪುಟ ವಿಸ್ತರಣೆ ವೇಳೆ ಖಾತೆ ಬದಲಾವಣೆ ಬಗ್ಗೆ ಗುಸುಗುಸು
*ಅಮಿತ್‌ ಶಾ ರೀತಿ ಕೆಲಸ ಮಾಡಬೇಕು ಎಂದು ಆರಗಗೆ ಹೇಳಿದ್ದ ಸಂತೋಷ್‌

ಬೆಂಗಳೂರು (ಏ. 20): ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರ್ಯನಿರ್ವಹಣೆ ಬಗ್ಗೆ ಸ್ವಪಕ್ಷೀಯರಿಂದ ಬಹಿರಂಗವಾಗಿ ಅಸಮಾಧಾನ ವ್ಯಕ್ತವಾಗುತ್ತಿರುವ ಮಧ್ಯೆಯೇ ಶೀಘ್ರದಲ್ಲಿಯೇ ನಡೆಯಲಿದೆ ಎನ್ನಲಾದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆ ಅವರ ಖಾತೆ ಬದಲಾವಣೆ ಮಾಡುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗುಸುಗುಸು ಕೇಳಿಬರುತ್ತಿದೆ. ಪಕ್ಷದಲ್ಲಿ ಹಿರಿಯರಾಗಿದ್ದರೂ ಮೊದಲ ಬಾರಿಗೆ ಸಚಿವ ಸ್ಥಾನದ ಜವಾಬ್ದಾರಿ ಹೊತ್ತುಕೊಂಡಿದ್ದರಿಂದಲೋ ಏನೋ ಎಂಬಂತೆ ಆರಗ ಜ್ಞಾನೇಂದ್ರ ಅವರು ತಮಗೆ ನೀಡಿದ ಗೃಹ ಖಾತೆ ನಿಭಾಯಿಸಲು ಪ್ರಯತ್ನ ಮಾಡುತ್ತಿದ್ದರೂ ಪಕ್ಷದ ವರಿಷ್ಠರಿಗೆ ಸಮಾಧಾನ ಇದ್ದಂತಿಲ್ಲ.

ಇದನ್ನೂ ಓದಿ: ಯಾವುದೇ ಧರ್ಮದವರಾಗಲಿ, ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡೋ ಪ್ರಶ್ನೆ ಇಲ್ಲ: ಆರಗ

ಇದಕ್ಕೆ ಪೂರಕ ಎಂಬಂತೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ಕೇಂದ್ರದ ಗೃಹ ಸಚಿವ ಅಮಿತ್‌ ಶಾ ರೀತಿ ಕಾರ್ಯನಿರ್ವಹಿಸಬೇಕು ಎಂಬುದನ್ನು ಹೋಲಿಕೆಯೊಂದಿಗೆ ಸೂಚ್ಯವಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಾಜೂಗೌಡ ಅವರು ಬಹಿರಂಗವಾಗಿಯೇ ಆರಗ ಜ್ಞಾನೆಂದ್ರ ಅವರ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಯತ್ನಾಳ ಅವರಂತೂ ರಾಜ್ಯಕ್ಕೆ ಒಬ್ಬ ಸಮರ್ಥ ಗೃಹ ಸಚಿವರು ಬೇಕಾಗಿದ್ದಾರೆ ಎಂಬುದಾಗಿ ಜಾಹೀರಾತು ನೀಡಬೇಕಿದೆ ಎಂದು ತೀಕ್ಷ್ಣವಾಗಿಯೇ ಹೇಳಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more