ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

Published : Apr 20, 2022, 01:21 PM IST

*ಮಂತ್ರಿ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷೀಯರಿಂದಲೇ ಅಸಮಾಧಾನ
*ಸಂಪುಟ ವಿಸ್ತರಣೆ ವೇಳೆ ಖಾತೆ ಬದಲಾವಣೆ ಬಗ್ಗೆ ಗುಸುಗುಸು
*ಅಮಿತ್‌ ಶಾ ರೀತಿ ಕೆಲಸ ಮಾಡಬೇಕು ಎಂದು ಆರಗಗೆ ಹೇಳಿದ್ದ ಸಂತೋಷ್‌

ಬೆಂಗಳೂರು (ಏ. 20): ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರ್ಯನಿರ್ವಹಣೆ ಬಗ್ಗೆ ಸ್ವಪಕ್ಷೀಯರಿಂದ ಬಹಿರಂಗವಾಗಿ ಅಸಮಾಧಾನ ವ್ಯಕ್ತವಾಗುತ್ತಿರುವ ಮಧ್ಯೆಯೇ ಶೀಘ್ರದಲ್ಲಿಯೇ ನಡೆಯಲಿದೆ ಎನ್ನಲಾದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆ ಅವರ ಖಾತೆ ಬದಲಾವಣೆ ಮಾಡುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗುಸುಗುಸು ಕೇಳಿಬರುತ್ತಿದೆ. ಪಕ್ಷದಲ್ಲಿ ಹಿರಿಯರಾಗಿದ್ದರೂ ಮೊದಲ ಬಾರಿಗೆ ಸಚಿವ ಸ್ಥಾನದ ಜವಾಬ್ದಾರಿ ಹೊತ್ತುಕೊಂಡಿದ್ದರಿಂದಲೋ ಏನೋ ಎಂಬಂತೆ ಆರಗ ಜ್ಞಾನೇಂದ್ರ ಅವರು ತಮಗೆ ನೀಡಿದ ಗೃಹ ಖಾತೆ ನಿಭಾಯಿಸಲು ಪ್ರಯತ್ನ ಮಾಡುತ್ತಿದ್ದರೂ ಪಕ್ಷದ ವರಿಷ್ಠರಿಗೆ ಸಮಾಧಾನ ಇದ್ದಂತಿಲ್ಲ.

ಇದನ್ನೂ ಓದಿ: ಯಾವುದೇ ಧರ್ಮದವರಾಗಲಿ, ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡೋ ಪ್ರಶ್ನೆ ಇಲ್ಲ: ಆರಗ

ಇದಕ್ಕೆ ಪೂರಕ ಎಂಬಂತೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ಕೇಂದ್ರದ ಗೃಹ ಸಚಿವ ಅಮಿತ್‌ ಶಾ ರೀತಿ ಕಾರ್ಯನಿರ್ವಹಿಸಬೇಕು ಎಂಬುದನ್ನು ಹೋಲಿಕೆಯೊಂದಿಗೆ ಸೂಚ್ಯವಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಾಜೂಗೌಡ ಅವರು ಬಹಿರಂಗವಾಗಿಯೇ ಆರಗ ಜ್ಞಾನೆಂದ್ರ ಅವರ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಯತ್ನಾಳ ಅವರಂತೂ ರಾಜ್ಯಕ್ಕೆ ಒಬ್ಬ ಸಮರ್ಥ ಗೃಹ ಸಚಿವರು ಬೇಕಾಗಿದ್ದಾರೆ ಎಂಬುದಾಗಿ ಜಾಹೀರಾತು ನೀಡಬೇಕಿದೆ ಎಂದು ತೀಕ್ಷ್ಣವಾಗಿಯೇ ಹೇಳಿದ್ದಾರೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more