ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

Published : Apr 20, 2022, 01:21 PM IST

*ಮಂತ್ರಿ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷೀಯರಿಂದಲೇ ಅಸಮಾಧಾನ
*ಸಂಪುಟ ವಿಸ್ತರಣೆ ವೇಳೆ ಖಾತೆ ಬದಲಾವಣೆ ಬಗ್ಗೆ ಗುಸುಗುಸು
*ಅಮಿತ್‌ ಶಾ ರೀತಿ ಕೆಲಸ ಮಾಡಬೇಕು ಎಂದು ಆರಗಗೆ ಹೇಳಿದ್ದ ಸಂತೋಷ್‌

ಬೆಂಗಳೂರು (ಏ. 20): ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರ್ಯನಿರ್ವಹಣೆ ಬಗ್ಗೆ ಸ್ವಪಕ್ಷೀಯರಿಂದ ಬಹಿರಂಗವಾಗಿ ಅಸಮಾಧಾನ ವ್ಯಕ್ತವಾಗುತ್ತಿರುವ ಮಧ್ಯೆಯೇ ಶೀಘ್ರದಲ್ಲಿಯೇ ನಡೆಯಲಿದೆ ಎನ್ನಲಾದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆ ಅವರ ಖಾತೆ ಬದಲಾವಣೆ ಮಾಡುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗುಸುಗುಸು ಕೇಳಿಬರುತ್ತಿದೆ. ಪಕ್ಷದಲ್ಲಿ ಹಿರಿಯರಾಗಿದ್ದರೂ ಮೊದಲ ಬಾರಿಗೆ ಸಚಿವ ಸ್ಥಾನದ ಜವಾಬ್ದಾರಿ ಹೊತ್ತುಕೊಂಡಿದ್ದರಿಂದಲೋ ಏನೋ ಎಂಬಂತೆ ಆರಗ ಜ್ಞಾನೇಂದ್ರ ಅವರು ತಮಗೆ ನೀಡಿದ ಗೃಹ ಖಾತೆ ನಿಭಾಯಿಸಲು ಪ್ರಯತ್ನ ಮಾಡುತ್ತಿದ್ದರೂ ಪಕ್ಷದ ವರಿಷ್ಠರಿಗೆ ಸಮಾಧಾನ ಇದ್ದಂತಿಲ್ಲ.

ಇದನ್ನೂ ಓದಿ: ಯಾವುದೇ ಧರ್ಮದವರಾಗಲಿ, ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡೋ ಪ್ರಶ್ನೆ ಇಲ್ಲ: ಆರಗ

ಇದಕ್ಕೆ ಪೂರಕ ಎಂಬಂತೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ಕೇಂದ್ರದ ಗೃಹ ಸಚಿವ ಅಮಿತ್‌ ಶಾ ರೀತಿ ಕಾರ್ಯನಿರ್ವಹಿಸಬೇಕು ಎಂಬುದನ್ನು ಹೋಲಿಕೆಯೊಂದಿಗೆ ಸೂಚ್ಯವಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಾಜೂಗೌಡ ಅವರು ಬಹಿರಂಗವಾಗಿಯೇ ಆರಗ ಜ್ಞಾನೆಂದ್ರ ಅವರ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಯತ್ನಾಳ ಅವರಂತೂ ರಾಜ್ಯಕ್ಕೆ ಒಬ್ಬ ಸಮರ್ಥ ಗೃಹ ಸಚಿವರು ಬೇಕಾಗಿದ್ದಾರೆ ಎಂಬುದಾಗಿ ಜಾಹೀರಾತು ನೀಡಬೇಕಿದೆ ಎಂದು ತೀಕ್ಷ್ಣವಾಗಿಯೇ ಹೇಳಿದ್ದಾರೆ.

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more