ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

ಸ್ವಪಕ್ಷೀಯರಿಂದಲೇ ಅಸಮಾಧಾನ, ಆರಗ ಜ್ಞಾನೇಂದ್ರ ಖಾತೆ ಬದಲಾವಣೆ ಪಕ್ಕಾ?

Published : Apr 20, 2022, 01:21 PM IST

*ಮಂತ್ರಿ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷೀಯರಿಂದಲೇ ಅಸಮಾಧಾನ
*ಸಂಪುಟ ವಿಸ್ತರಣೆ ವೇಳೆ ಖಾತೆ ಬದಲಾವಣೆ ಬಗ್ಗೆ ಗುಸುಗುಸು
*ಅಮಿತ್‌ ಶಾ ರೀತಿ ಕೆಲಸ ಮಾಡಬೇಕು ಎಂದು ಆರಗಗೆ ಹೇಳಿದ್ದ ಸಂತೋಷ್‌

ಬೆಂಗಳೂರು (ಏ. 20): ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಾರ್ಯನಿರ್ವಹಣೆ ಬಗ್ಗೆ ಸ್ವಪಕ್ಷೀಯರಿಂದ ಬಹಿರಂಗವಾಗಿ ಅಸಮಾಧಾನ ವ್ಯಕ್ತವಾಗುತ್ತಿರುವ ಮಧ್ಯೆಯೇ ಶೀಘ್ರದಲ್ಲಿಯೇ ನಡೆಯಲಿದೆ ಎನ್ನಲಾದ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವೇಳೆ ಅವರ ಖಾತೆ ಬದಲಾವಣೆ ಮಾಡುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಗುಸುಗುಸು ಕೇಳಿಬರುತ್ತಿದೆ. ಪಕ್ಷದಲ್ಲಿ ಹಿರಿಯರಾಗಿದ್ದರೂ ಮೊದಲ ಬಾರಿಗೆ ಸಚಿವ ಸ್ಥಾನದ ಜವಾಬ್ದಾರಿ ಹೊತ್ತುಕೊಂಡಿದ್ದರಿಂದಲೋ ಏನೋ ಎಂಬಂತೆ ಆರಗ ಜ್ಞಾನೇಂದ್ರ ಅವರು ತಮಗೆ ನೀಡಿದ ಗೃಹ ಖಾತೆ ನಿಭಾಯಿಸಲು ಪ್ರಯತ್ನ ಮಾಡುತ್ತಿದ್ದರೂ ಪಕ್ಷದ ವರಿಷ್ಠರಿಗೆ ಸಮಾಧಾನ ಇದ್ದಂತಿಲ್ಲ.

ಇದನ್ನೂ ಓದಿ: ಯಾವುದೇ ಧರ್ಮದವರಾಗಲಿ, ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡೋ ಪ್ರಶ್ನೆ ಇಲ್ಲ: ಆರಗ

ಇದಕ್ಕೆ ಪೂರಕ ಎಂಬಂತೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ಕೇಂದ್ರದ ಗೃಹ ಸಚಿವ ಅಮಿತ್‌ ಶಾ ರೀತಿ ಕಾರ್ಯನಿರ್ವಹಿಸಬೇಕು ಎಂಬುದನ್ನು ಹೋಲಿಕೆಯೊಂದಿಗೆ ಸೂಚ್ಯವಾಗಿ ಹೇಳಿದ್ದರು. ಅದರ ಬೆನ್ನಲ್ಲೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಾಜೂಗೌಡ ಅವರು ಬಹಿರಂಗವಾಗಿಯೇ ಆರಗ ಜ್ಞಾನೆಂದ್ರ ಅವರ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಯತ್ನಾಳ ಅವರಂತೂ ರಾಜ್ಯಕ್ಕೆ ಒಬ್ಬ ಸಮರ್ಥ ಗೃಹ ಸಚಿವರು ಬೇಕಾಗಿದ್ದಾರೆ ಎಂಬುದಾಗಿ ಜಾಹೀರಾತು ನೀಡಬೇಕಿದೆ ಎಂದು ತೀಕ್ಷ್ಣವಾಗಿಯೇ ಹೇಳಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more