ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಬಿಜೆಪಿ: ಸಿದ್ದರಾಮಯ್ಯ, ಡಿಕೆಶಿಗೆ ಲೀಗಲ್ ನೋಟಿಸ್

Jul 31, 2020, 2:56 PM IST

ಬೆಂಗಳೂರು(ಜು.31): ಕೊವಿಡ್ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಭಂಧಿಸಿದಂತೆ  ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕ.ಕೆ ಶಿವಕುಮಾರ್‌ಗೆ ಬಿಜೆಪಿ ನೋಟಿಸ್ ಕಳುಹಿಸಿದೆ. ಮೆಡಿಕಲ್ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದ ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ಲೀಗಲ್ ನೊಟಿಸ್ ಕಳುಹಿಸಿದೆ.

MSIL ಬಗ್ಗೆ ಅಧ್ಯಯನ ಮಾಡಿ ನನ್ನ ಕೆಲಸ ಶುರುಮಾಡ್ತೇನೆ: ಹರತಾಳು ಹಾಲಪ್ಪ

ಯಾವ ಆಧಾರದಲ್ಲಿ ಭ್ರಷ್ಟಾಚಾರ ಆರೋಪ ಮಾಡಿದ್ದೀರಿ ಎಂದು ಬಿಜೆಪಿ ನಾಯಕರು ಲೀಗಲ್ ನೋಟಿಸ್ ಮೂಲಕ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಲೀಗಲ್ ನೋಟಿಸ್ ಮೂಲಕ ಬಿಜೆಪಿ ಬಿಸಿ ಮುಟ್ಟಿಸಿದೆ. ಕೋವಿಡ್ ಕಿಟ್ ಖರೀದಿಯಲ್ಲಿ 2 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆ ಎಂದು ಯಾವ ಆಧಾರದಲ್ಲಿ ಆರೋಪ ಮಾಡಿದ್ದೀರಿ ಎಂದು ಪ್ರಶ್ನಿಸಲಾಗಿದೆ.