ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

Suvarna News   | Asianet News
Published : Jan 17, 2020, 11:46 AM ISTUpdated : Jan 17, 2020, 11:48 AM IST

ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ಮಂಡ್ಯ(ಜ.17): ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ದೇವರ ಪೂಜೆ ಸಲ್ಲಿಸುವ ವಿಚಾರದಲ್ಲಿ ಜಗಳ ನಡೆದಿದ್ದು, ಜೆಡಿಎಸ್ ಹಾಗೂ ಬಿಜೆಪಿ‌ ಮುಖಂಡರ ನಡುವೆ ಮಾತಿಗೆ ಮಾತು ಬೆಳೆದಿದೆ. ಮೊದಲು ಪೂಜೆ ಸಲ್ಲಿಸುವ ವಿಚಾರಕ್ಕೆ ಜಗಳ ಆರಂಭವಾಗಿ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಮಂಡ್ಯ ಜಿಲ್ಲೆಯ ಕೆ. ಆರ್‌. ಪೇಟೆ ತಾಲೂಕಿನ ಬಿಲ್ಲೇನಹಳ್ಳಿಯ ಗವಿರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗಲಾಟೆ ನಡೆದಿದೆ.

ನೀರಿಲ್ಲದ ಜಲಪಾತದಲ್ಲಿ ಜಲಪಾತೋತ್ಸವ, ವೈಭವ ಸೃಷ್ಟಿಸೋಕೆ KRS ನೀರು..?

ಗವಿರಂಗನಾಥಸ್ವಾಮಿಯ ರಥೋತ್ಸವದ ವೇಳೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜಗಳ ಆರಂಭವಾಗಿ ಬಿಜೆಪಿ ಶಾಸಕ ನಾರಾಯಣಗೌಡ ಮತ್ತು ಬೆಂಬಲಿಗರು ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಮೊದಲು ನಾನು ಪೂಜೆ ಮಾಡಬೇಕು ಎಂದು ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರು ತಗಾದೆ ತೆಗೆದಿದ್ದು, ಈ ಕ್ಷೇತ್ರದ ಶಾಸಕ ಮೊಲದ ಪೂಜೆ ಮಾಡಬೇಕು ಎಂದು ನಾರಾಯಣಗೌಡ ಹಾಗೂ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಮೊದಲ ಪೂಜೆ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ನಂತರ ಪೊಲೀಸರು ಜಗಳದ ಮಧ್ಯ ಪ್ರವೇಶ ಮಾಡಿದ್ದಾರೆ. ಬಳಿಕ ರಾಜಹುಲಿ ದಿನೇಶ್‌ರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?