ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

Published : Jan 17, 2020, 11:46 AM ISTUpdated : Jan 17, 2020, 11:48 AM IST

ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ಮಂಡ್ಯ(ಜ.17): ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ದೇವರ ಪೂಜೆ ಸಲ್ಲಿಸುವ ವಿಚಾರದಲ್ಲಿ ಜಗಳ ನಡೆದಿದ್ದು, ಜೆಡಿಎಸ್ ಹಾಗೂ ಬಿಜೆಪಿ‌ ಮುಖಂಡರ ನಡುವೆ ಮಾತಿಗೆ ಮಾತು ಬೆಳೆದಿದೆ. ಮೊದಲು ಪೂಜೆ ಸಲ್ಲಿಸುವ ವಿಚಾರಕ್ಕೆ ಜಗಳ ಆರಂಭವಾಗಿ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಮಂಡ್ಯ ಜಿಲ್ಲೆಯ ಕೆ. ಆರ್‌. ಪೇಟೆ ತಾಲೂಕಿನ ಬಿಲ್ಲೇನಹಳ್ಳಿಯ ಗವಿರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗಲಾಟೆ ನಡೆದಿದೆ.

ನೀರಿಲ್ಲದ ಜಲಪಾತದಲ್ಲಿ ಜಲಪಾತೋತ್ಸವ, ವೈಭವ ಸೃಷ್ಟಿಸೋಕೆ KRS ನೀರು..?

ಗವಿರಂಗನಾಥಸ್ವಾಮಿಯ ರಥೋತ್ಸವದ ವೇಳೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜಗಳ ಆರಂಭವಾಗಿ ಬಿಜೆಪಿ ಶಾಸಕ ನಾರಾಯಣಗೌಡ ಮತ್ತು ಬೆಂಬಲಿಗರು ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಮೊದಲು ನಾನು ಪೂಜೆ ಮಾಡಬೇಕು ಎಂದು ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರು ತಗಾದೆ ತೆಗೆದಿದ್ದು, ಈ ಕ್ಷೇತ್ರದ ಶಾಸಕ ಮೊಲದ ಪೂಜೆ ಮಾಡಬೇಕು ಎಂದು ನಾರಾಯಣಗೌಡ ಹಾಗೂ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಮೊದಲ ಪೂಜೆ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ನಂತರ ಪೊಲೀಸರು ಜಗಳದ ಮಧ್ಯ ಪ್ರವೇಶ ಮಾಡಿದ್ದಾರೆ. ಬಳಿಕ ರಾಜಹುಲಿ ದಿನೇಶ್‌ರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!