ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

Suvarna News   | Asianet News
Published : Jan 17, 2020, 11:46 AM ISTUpdated : Jan 17, 2020, 11:48 AM IST

ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ಮಂಡ್ಯ(ಜ.17): ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

ದೇವರ ಪೂಜೆ ಸಲ್ಲಿಸುವ ವಿಚಾರದಲ್ಲಿ ಜಗಳ ನಡೆದಿದ್ದು, ಜೆಡಿಎಸ್ ಹಾಗೂ ಬಿಜೆಪಿ‌ ಮುಖಂಡರ ನಡುವೆ ಮಾತಿಗೆ ಮಾತು ಬೆಳೆದಿದೆ. ಮೊದಲು ಪೂಜೆ ಸಲ್ಲಿಸುವ ವಿಚಾರಕ್ಕೆ ಜಗಳ ಆರಂಭವಾಗಿ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಮಂಡ್ಯ ಜಿಲ್ಲೆಯ ಕೆ. ಆರ್‌. ಪೇಟೆ ತಾಲೂಕಿನ ಬಿಲ್ಲೇನಹಳ್ಳಿಯ ಗವಿರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗಲಾಟೆ ನಡೆದಿದೆ.

ನೀರಿಲ್ಲದ ಜಲಪಾತದಲ್ಲಿ ಜಲಪಾತೋತ್ಸವ, ವೈಭವ ಸೃಷ್ಟಿಸೋಕೆ KRS ನೀರು..?

ಗವಿರಂಗನಾಥಸ್ವಾಮಿಯ ರಥೋತ್ಸವದ ವೇಳೆ ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಜಗಳ ಆರಂಭವಾಗಿ ಬಿಜೆಪಿ ಶಾಸಕ ನಾರಾಯಣಗೌಡ ಮತ್ತು ಬೆಂಬಲಿಗರು ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಮೊದಲು ನಾನು ಪೂಜೆ ಮಾಡಬೇಕು ಎಂದು ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರು ತಗಾದೆ ತೆಗೆದಿದ್ದು, ಈ ಕ್ಷೇತ್ರದ ಶಾಸಕ ಮೊಲದ ಪೂಜೆ ಮಾಡಬೇಕು ಎಂದು ನಾರಾಯಣಗೌಡ ಹಾಗೂ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಮೊದಲ ಪೂಜೆ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ನಂತರ ಪೊಲೀಸರು ಜಗಳದ ಮಧ್ಯ ಪ್ರವೇಶ ಮಾಡಿದ್ದಾರೆ. ಬಳಿಕ ರಾಜಹುಲಿ ದಿನೇಶ್‌ರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!