ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

Published : Jul 17, 2024, 05:30 PM IST

ಸರ್ಕಾರಕ್ಕೆ ಸವಾಲು ಹಾಕಲು ಸಿದ್ಧವಾಗಿತ್ತು ಮೈತ್ರಿ ಪಡೆ!
ಮುಂಗಾರು ಅಧಿವೇಶನದ ತುಂಬಾ ಪ್ರಶ್ನೆಗಳ ಸುರಿಮಳೆ!
ವಿಧಾನಸೌಧದಲ್ಲಿ ಮಾರ್ದನಿಸಿದ ಸಂಗತಿಗಳೇನೇನು..?
 

ಸದನದಲ್ಲಿ ಶುರುವಾಗಿದೆ ಮಾತಿನ ಕದನ. ಭುಗಿಲೆದ್ದಿದೆ ಕೋಲಾಹಲ. ಹಗರಣ, ಅಕ್ರಮ ಪ್ರಕರಣ, ಲೂಟಿ ಹಣ. ಇಂಥಾ ವಿಚಾರಗಳೇ ವಿಧಾನಸೌಧದಲ್ಲಿ ಮಾರ್ದನಿಸ್ತಾ ಇದಾವೆ. ಇದೇ ಸೋಮವಾರದಿಂದ ವಿಧಾನಸಭೆಯ ಅಧಿವೇಶನ(Assembly session) ಆರಂಭವಾಯ್ತು. ನಿರೀಕ್ಷೆಯಂತೆ ಆ ಸದನ ಕಣವೇ ಕದನ ಭೂಮಿಯಾಗಿ ಮಾರ್ಪಟ್ಟಿದೆ. 9 ದಿನಗಳ ಕಾಲ, ಅಂದ್ರೆ  ಜುಲೈ 26ರವರೆಗೆ ಈ ಮಳೆಗಾಲದ ಅಧಿವೇಶನ ನಡೆಯಲಿದೆ. ಅಷ್ಟೂ ದಿನವೂ ಇಂಥದ್ದೇ ಯುದ್ಧ ಸನ್ನಿವೇಶ ನೋಡೋ ಸಾಧ್ಯತೆಯಂತೂ ದಟ್ಟವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ನಂತರ ನಡೀತಿರೊ ಮೊದಲ ಅಧಿವೇಶನ ಇದು. ಲೋಕಸಭಾ ಚುನಾವಣೆ ಗೆಲುವಿನ ಉತ್ಸಾಹದಲ್ಲಿರೋ ಬಿಜೆಪಿ(BJP) ಮತ್ತು ಜೆಡಿಎಸ್‌(JDS), ಸಿದ್ದರಾಮಯ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳೋಕೆ ಸಮನ್ವಯ ಸಭೆಯನ್ನೇ ನಡೆಸಿ ಸನ್ನದ್ಧವಾಗಿದ್ವು. ಆಡಳಿತ ಪಕ್ಷದ ವಿರುದ್ಧ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿದ್ವು. ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿ ನಡುಕ ಹುಟ್ಟಿಸೋಕೆ ಏನೇನೆಲ್ಲಾ ಸರಕುಗಳು ಬೇಕೋ, ಯಾವೆಲ್ಲಾ ಶಸ್ತ್ರಾಸ್ತ್ರಗಳು ಬೇಕೋ, ಅಷ್ಟೂ ಆಯುಧಗಳು ಈಗ ವಿಪಕ್ಷಗಳ ಬತ್ತಳಿಕೆಯಲ್ಲಿ ಭದ್ರವಾಗಿವೆ. ಆ ಅಸ್ತ್ರಗಳನ್ನೇ ಬಳಸಿಕೊಂಡು, ಸದನದಲ್ಲಿ  ಒಂದೊಂದೇ ಬಾಣ ಪ್ರಯೋಗ ಮಾಡ್ತಾ ಇವೆ, ಮಿತ್ರಪಕ್ಷಗಳು.

ಇದನ್ನೂ ವೀಕ್ಷಿಸಿ:  ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more