ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

Published : Jul 17, 2024, 05:30 PM IST

ಸರ್ಕಾರಕ್ಕೆ ಸವಾಲು ಹಾಕಲು ಸಿದ್ಧವಾಗಿತ್ತು ಮೈತ್ರಿ ಪಡೆ!
ಮುಂಗಾರು ಅಧಿವೇಶನದ ತುಂಬಾ ಪ್ರಶ್ನೆಗಳ ಸುರಿಮಳೆ!
ವಿಧಾನಸೌಧದಲ್ಲಿ ಮಾರ್ದನಿಸಿದ ಸಂಗತಿಗಳೇನೇನು..?
 

ಸದನದಲ್ಲಿ ಶುರುವಾಗಿದೆ ಮಾತಿನ ಕದನ. ಭುಗಿಲೆದ್ದಿದೆ ಕೋಲಾಹಲ. ಹಗರಣ, ಅಕ್ರಮ ಪ್ರಕರಣ, ಲೂಟಿ ಹಣ. ಇಂಥಾ ವಿಚಾರಗಳೇ ವಿಧಾನಸೌಧದಲ್ಲಿ ಮಾರ್ದನಿಸ್ತಾ ಇದಾವೆ. ಇದೇ ಸೋಮವಾರದಿಂದ ವಿಧಾನಸಭೆಯ ಅಧಿವೇಶನ(Assembly session) ಆರಂಭವಾಯ್ತು. ನಿರೀಕ್ಷೆಯಂತೆ ಆ ಸದನ ಕಣವೇ ಕದನ ಭೂಮಿಯಾಗಿ ಮಾರ್ಪಟ್ಟಿದೆ. 9 ದಿನಗಳ ಕಾಲ, ಅಂದ್ರೆ  ಜುಲೈ 26ರವರೆಗೆ ಈ ಮಳೆಗಾಲದ ಅಧಿವೇಶನ ನಡೆಯಲಿದೆ. ಅಷ್ಟೂ ದಿನವೂ ಇಂಥದ್ದೇ ಯುದ್ಧ ಸನ್ನಿವೇಶ ನೋಡೋ ಸಾಧ್ಯತೆಯಂತೂ ದಟ್ಟವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ನಂತರ ನಡೀತಿರೊ ಮೊದಲ ಅಧಿವೇಶನ ಇದು. ಲೋಕಸಭಾ ಚುನಾವಣೆ ಗೆಲುವಿನ ಉತ್ಸಾಹದಲ್ಲಿರೋ ಬಿಜೆಪಿ(BJP) ಮತ್ತು ಜೆಡಿಎಸ್‌(JDS), ಸಿದ್ದರಾಮಯ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳೋಕೆ ಸಮನ್ವಯ ಸಭೆಯನ್ನೇ ನಡೆಸಿ ಸನ್ನದ್ಧವಾಗಿದ್ವು. ಆಡಳಿತ ಪಕ್ಷದ ವಿರುದ್ಧ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿದ್ವು. ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿ ನಡುಕ ಹುಟ್ಟಿಸೋಕೆ ಏನೇನೆಲ್ಲಾ ಸರಕುಗಳು ಬೇಕೋ, ಯಾವೆಲ್ಲಾ ಶಸ್ತ್ರಾಸ್ತ್ರಗಳು ಬೇಕೋ, ಅಷ್ಟೂ ಆಯುಧಗಳು ಈಗ ವಿಪಕ್ಷಗಳ ಬತ್ತಳಿಕೆಯಲ್ಲಿ ಭದ್ರವಾಗಿವೆ. ಆ ಅಸ್ತ್ರಗಳನ್ನೇ ಬಳಸಿಕೊಂಡು, ಸದನದಲ್ಲಿ  ಒಂದೊಂದೇ ಬಾಣ ಪ್ರಯೋಗ ಮಾಡ್ತಾ ಇವೆ, ಮಿತ್ರಪಕ್ಷಗಳು.

ಇದನ್ನೂ ವೀಕ್ಷಿಸಿ:  ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more