ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

ಸದನ ಕದನ ರಣಾಂಗಣ ಆಗಿದ್ದೇಕೆ ಗೊತ್ತಾ..? ವಿಪಕ್ಷಗಳ ಆರೋಪಕ್ಕೆ ಸರ್ಕಾರ ನೀಡಿದ ಉತ್ತರವೇನು ?

Published : Jul 17, 2024, 05:30 PM IST

ಸರ್ಕಾರಕ್ಕೆ ಸವಾಲು ಹಾಕಲು ಸಿದ್ಧವಾಗಿತ್ತು ಮೈತ್ರಿ ಪಡೆ!
ಮುಂಗಾರು ಅಧಿವೇಶನದ ತುಂಬಾ ಪ್ರಶ್ನೆಗಳ ಸುರಿಮಳೆ!
ವಿಧಾನಸೌಧದಲ್ಲಿ ಮಾರ್ದನಿಸಿದ ಸಂಗತಿಗಳೇನೇನು..?
 

ಸದನದಲ್ಲಿ ಶುರುವಾಗಿದೆ ಮಾತಿನ ಕದನ. ಭುಗಿಲೆದ್ದಿದೆ ಕೋಲಾಹಲ. ಹಗರಣ, ಅಕ್ರಮ ಪ್ರಕರಣ, ಲೂಟಿ ಹಣ. ಇಂಥಾ ವಿಚಾರಗಳೇ ವಿಧಾನಸೌಧದಲ್ಲಿ ಮಾರ್ದನಿಸ್ತಾ ಇದಾವೆ. ಇದೇ ಸೋಮವಾರದಿಂದ ವಿಧಾನಸಭೆಯ ಅಧಿವೇಶನ(Assembly session) ಆರಂಭವಾಯ್ತು. ನಿರೀಕ್ಷೆಯಂತೆ ಆ ಸದನ ಕಣವೇ ಕದನ ಭೂಮಿಯಾಗಿ ಮಾರ್ಪಟ್ಟಿದೆ. 9 ದಿನಗಳ ಕಾಲ, ಅಂದ್ರೆ  ಜುಲೈ 26ರವರೆಗೆ ಈ ಮಳೆಗಾಲದ ಅಧಿವೇಶನ ನಡೆಯಲಿದೆ. ಅಷ್ಟೂ ದಿನವೂ ಇಂಥದ್ದೇ ಯುದ್ಧ ಸನ್ನಿವೇಶ ನೋಡೋ ಸಾಧ್ಯತೆಯಂತೂ ದಟ್ಟವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ನಂತರ ನಡೀತಿರೊ ಮೊದಲ ಅಧಿವೇಶನ ಇದು. ಲೋಕಸಭಾ ಚುನಾವಣೆ ಗೆಲುವಿನ ಉತ್ಸಾಹದಲ್ಲಿರೋ ಬಿಜೆಪಿ(BJP) ಮತ್ತು ಜೆಡಿಎಸ್‌(JDS), ಸಿದ್ದರಾಮಯ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳೋಕೆ ಸಮನ್ವಯ ಸಭೆಯನ್ನೇ ನಡೆಸಿ ಸನ್ನದ್ಧವಾಗಿದ್ವು. ಆಡಳಿತ ಪಕ್ಷದ ವಿರುದ್ಧ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿದ್ವು. ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿ ನಡುಕ ಹುಟ್ಟಿಸೋಕೆ ಏನೇನೆಲ್ಲಾ ಸರಕುಗಳು ಬೇಕೋ, ಯಾವೆಲ್ಲಾ ಶಸ್ತ್ರಾಸ್ತ್ರಗಳು ಬೇಕೋ, ಅಷ್ಟೂ ಆಯುಧಗಳು ಈಗ ವಿಪಕ್ಷಗಳ ಬತ್ತಳಿಕೆಯಲ್ಲಿ ಭದ್ರವಾಗಿವೆ. ಆ ಅಸ್ತ್ರಗಳನ್ನೇ ಬಳಸಿಕೊಂಡು, ಸದನದಲ್ಲಿ  ಒಂದೊಂದೇ ಬಾಣ ಪ್ರಯೋಗ ಮಾಡ್ತಾ ಇವೆ, ಮಿತ್ರಪಕ್ಷಗಳು.

ಇದನ್ನೂ ವೀಕ್ಷಿಸಿ:  ಏಕಾಏಕಿ ಕುಸಿದು ಬಿತ್ತು ಗುಡ್ಡ..ಕರಾವಳಿ, ಮಲೆನಾಡು ತತ್ತರ! ಉಕ್ಕಿ ಹರಿಯುತ್ತಿವೆ ಹಳ್ಳ ಕೊಳ್ಳ.. ಸೇತುವೆಗಳು ಜಲಾವೃತ..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more