ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

Published : Sep 13, 2023, 10:44 AM IST

ಮುಳುಗಡೆ ನಗರಿ ಎಂಬ ಹೆಸರಿಗೆ ಸಾಕ್ಷಿಯಾಗಿರೋ  ಆ ಊರಲ್ಲಿ ಹಿನ್ನೀರು, ಎಲ್ಲಿ ನೋಡಿದ್ರೂ ಹಸಿರುಗಳ ತಾಣವೇ ಕಾಣ ಸಿಗುತ್ತಿತ್ತು. ಆದ್ರೆ ಈಗ ಕಳೆದೊಂದು ವರ್ಷದಿಂದ ರಸ್ತೆಯಲ್ಲಿ ಓಡಾಡೋಕೆ ಹಿಂದೆ ಮುಂದೆ ನೋಡುವಂತಾಗಿದೆ. ಯಾಕಂದ್ರೆ ಮಕ್ಕಳು, ಮಹಿಳೆಯರು ಓಡಾಡುವ ಜಾಗದಲ್ಲಿಯೇ ನಿತ್ಯ ಮಾಟ,ಮಂತ್ರ, ವಾಮಾಚಾರ ಕಂಡು ಬರ್ತಿದೆ.
 

ರಸ್ತೆಯಲ್ಲಿ ಎಲ್ಲೆಂದರಲ್ಲಿ ಕಾಣ ಸಿಗುವ ಬೊಂಬೆ, ಕುಂಕುಮ..ನಿತ್ಯ ಆತಂಕದಲ್ಲೇ ಓಡಾತ್ತಿರೋ ಮಕ್ಕಳು, ಮಹಿಳೆಯರು.. ವಾಮಾಚಾರಕ್ಕಿಳಿದವರ ವಿರುದ್ಧ ಕ್ರಮಕ್ಕೆ ಒತ್ತಾಐಇಸುತ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ಮುಳುಗಡೆ ನಗರಿ ಬಾಗಲಕೋಟೆಯಲ್ಲಿ. ಕಳೆದೊಂದು ವರ್ಷದಿಂದ ಇಲ್ಲಿ ವಾಮಾಚಾರಗಳು (Black magic) ನಡೆಯುತ್ತಿವೆ. ಅದ್ರಲ್ಲೂ ಇತ್ತೀಚೆಗೆ ಅತಿಯಾಗಿದೆ. ಮುಖ್ಯವಾಗಿ ವಿದ್ಯಾಗಿರಿ ಮತ್ತು ನವನಗರಗಳಲ್ಲಿ ಮೂರು ರಸ್ತೆಗಳು ಸಂಧಿಸುವ ಸ್ಥಳದಲ್ಲಿ ಕರಿ ಬಟ್ಟೆಯ ಬೊಂಬೆಗಳು(Dolls), ಕುಂಕುಮ ಹಚ್ಚಿದ ಗಂಟು, ಬಾಳೆಹಣ್ಣು ಹೀಗೆ ವಿವಿಧ ವಸ್ತುಗಳನ್ನ ನಡುರಸ್ತೆಯಲ್ಲಿಯೇ ಇರಿಸಿ ವಾಮಾಚಾರ ನಡೆಸುತ್ತಿದ್ದಾರೆ. ಇವರ ಮೌಢ್ಯ ಆಚರಣೆಯಿಂದ ಜನ ರಸ್ತೆಗಳಲ್ಲಿ ಓಡಾಡೋಕು ಭಯ ಪಡುತ್ತಿದ್ದಾರೆ. ನಿತ್ಯ ಮಕ್ಕಳು ಇದೆ ರಸ್ತೆ ಮಾರ್ಗವಾಗೆ ಶಾಲೆ, ಹಾಸ್ಟೆಲ್‌ಗಳಿಗೆ ಓಡಾಡಬೇಕು. ಚಿಕ್ಕ ಮಕ್ಕಳಲ್ಲಿ ಇಂಥ ಮಾಟ, ಮಂತ್ರ, ವಾಮಾಚಾರದ ದೃಶ್ಯಗಳು ಭಯ ಹುಟ್ಟಿಸುತ್ತಿವೆ. ಇನ್ನು ಸಂಜೆ ಹೊತ್ತಲ್ಲಿ ಮಹಿಳೆಯರು(womens) ಅಷ್ಟೇ ಅಲ್ಲ ಪುರುಷರು ಕೂಡ ಈ ರಸ್ತೆಗಳಲ್ಲಿ ತಿರುಗಾಡಲು ಹಿಂಜರಿಕೆಯಿಂದಲೇ ಹೆಜ್ಜೆ ಇಡುತ್ತಿದ್ದಾರೆ. ಹೀಗಾಗಿ ಈ ವಾಮಾಚಾರಗಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಪಾಲಿಕೆ ಯಡವಟ್ಟಿಗೆ ಜನ ಜೀವನ ಅಸ್ತವ್ಯಸ್ತ: ರಸ್ತೆಯನ್ನೇ ಪಾರ್ಕ್ ಮಾಡಲು ಮುಂದಾದ ಪಾಲಿಕೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more