ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

Published : Sep 13, 2023, 10:44 AM IST

ಮುಳುಗಡೆ ನಗರಿ ಎಂಬ ಹೆಸರಿಗೆ ಸಾಕ್ಷಿಯಾಗಿರೋ  ಆ ಊರಲ್ಲಿ ಹಿನ್ನೀರು, ಎಲ್ಲಿ ನೋಡಿದ್ರೂ ಹಸಿರುಗಳ ತಾಣವೇ ಕಾಣ ಸಿಗುತ್ತಿತ್ತು. ಆದ್ರೆ ಈಗ ಕಳೆದೊಂದು ವರ್ಷದಿಂದ ರಸ್ತೆಯಲ್ಲಿ ಓಡಾಡೋಕೆ ಹಿಂದೆ ಮುಂದೆ ನೋಡುವಂತಾಗಿದೆ. ಯಾಕಂದ್ರೆ ಮಕ್ಕಳು, ಮಹಿಳೆಯರು ಓಡಾಡುವ ಜಾಗದಲ್ಲಿಯೇ ನಿತ್ಯ ಮಾಟ,ಮಂತ್ರ, ವಾಮಾಚಾರ ಕಂಡು ಬರ್ತಿದೆ.
 

ರಸ್ತೆಯಲ್ಲಿ ಎಲ್ಲೆಂದರಲ್ಲಿ ಕಾಣ ಸಿಗುವ ಬೊಂಬೆ, ಕುಂಕುಮ..ನಿತ್ಯ ಆತಂಕದಲ್ಲೇ ಓಡಾತ್ತಿರೋ ಮಕ್ಕಳು, ಮಹಿಳೆಯರು.. ವಾಮಾಚಾರಕ್ಕಿಳಿದವರ ವಿರುದ್ಧ ಕ್ರಮಕ್ಕೆ ಒತ್ತಾಐಇಸುತ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ಮುಳುಗಡೆ ನಗರಿ ಬಾಗಲಕೋಟೆಯಲ್ಲಿ. ಕಳೆದೊಂದು ವರ್ಷದಿಂದ ಇಲ್ಲಿ ವಾಮಾಚಾರಗಳು (Black magic) ನಡೆಯುತ್ತಿವೆ. ಅದ್ರಲ್ಲೂ ಇತ್ತೀಚೆಗೆ ಅತಿಯಾಗಿದೆ. ಮುಖ್ಯವಾಗಿ ವಿದ್ಯಾಗಿರಿ ಮತ್ತು ನವನಗರಗಳಲ್ಲಿ ಮೂರು ರಸ್ತೆಗಳು ಸಂಧಿಸುವ ಸ್ಥಳದಲ್ಲಿ ಕರಿ ಬಟ್ಟೆಯ ಬೊಂಬೆಗಳು(Dolls), ಕುಂಕುಮ ಹಚ್ಚಿದ ಗಂಟು, ಬಾಳೆಹಣ್ಣು ಹೀಗೆ ವಿವಿಧ ವಸ್ತುಗಳನ್ನ ನಡುರಸ್ತೆಯಲ್ಲಿಯೇ ಇರಿಸಿ ವಾಮಾಚಾರ ನಡೆಸುತ್ತಿದ್ದಾರೆ. ಇವರ ಮೌಢ್ಯ ಆಚರಣೆಯಿಂದ ಜನ ರಸ್ತೆಗಳಲ್ಲಿ ಓಡಾಡೋಕು ಭಯ ಪಡುತ್ತಿದ್ದಾರೆ. ನಿತ್ಯ ಮಕ್ಕಳು ಇದೆ ರಸ್ತೆ ಮಾರ್ಗವಾಗೆ ಶಾಲೆ, ಹಾಸ್ಟೆಲ್‌ಗಳಿಗೆ ಓಡಾಡಬೇಕು. ಚಿಕ್ಕ ಮಕ್ಕಳಲ್ಲಿ ಇಂಥ ಮಾಟ, ಮಂತ್ರ, ವಾಮಾಚಾರದ ದೃಶ್ಯಗಳು ಭಯ ಹುಟ್ಟಿಸುತ್ತಿವೆ. ಇನ್ನು ಸಂಜೆ ಹೊತ್ತಲ್ಲಿ ಮಹಿಳೆಯರು(womens) ಅಷ್ಟೇ ಅಲ್ಲ ಪುರುಷರು ಕೂಡ ಈ ರಸ್ತೆಗಳಲ್ಲಿ ತಿರುಗಾಡಲು ಹಿಂಜರಿಕೆಯಿಂದಲೇ ಹೆಜ್ಜೆ ಇಡುತ್ತಿದ್ದಾರೆ. ಹೀಗಾಗಿ ಈ ವಾಮಾಚಾರಗಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಪಾಲಿಕೆ ಯಡವಟ್ಟಿಗೆ ಜನ ಜೀವನ ಅಸ್ತವ್ಯಸ್ತ: ರಸ್ತೆಯನ್ನೇ ಪಾರ್ಕ್ ಮಾಡಲು ಮುಂದಾದ ಪಾಲಿಕೆ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ