ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

ಬಾಗಲಕೋಟೆಯಲ್ಲಿ ಹೆಚ್ಚಾದ ವಾಮಾಚಾರ: ಮಾಟ, ಮಂತ್ರದಿಂದ ಸಾರ್ವಜನಿಕರಿಗೆ ಭಯ !

Published : Sep 13, 2023, 10:44 AM IST

ಮುಳುಗಡೆ ನಗರಿ ಎಂಬ ಹೆಸರಿಗೆ ಸಾಕ್ಷಿಯಾಗಿರೋ  ಆ ಊರಲ್ಲಿ ಹಿನ್ನೀರು, ಎಲ್ಲಿ ನೋಡಿದ್ರೂ ಹಸಿರುಗಳ ತಾಣವೇ ಕಾಣ ಸಿಗುತ್ತಿತ್ತು. ಆದ್ರೆ ಈಗ ಕಳೆದೊಂದು ವರ್ಷದಿಂದ ರಸ್ತೆಯಲ್ಲಿ ಓಡಾಡೋಕೆ ಹಿಂದೆ ಮುಂದೆ ನೋಡುವಂತಾಗಿದೆ. ಯಾಕಂದ್ರೆ ಮಕ್ಕಳು, ಮಹಿಳೆಯರು ಓಡಾಡುವ ಜಾಗದಲ್ಲಿಯೇ ನಿತ್ಯ ಮಾಟ,ಮಂತ್ರ, ವಾಮಾಚಾರ ಕಂಡು ಬರ್ತಿದೆ.
 

ರಸ್ತೆಯಲ್ಲಿ ಎಲ್ಲೆಂದರಲ್ಲಿ ಕಾಣ ಸಿಗುವ ಬೊಂಬೆ, ಕುಂಕುಮ..ನಿತ್ಯ ಆತಂಕದಲ್ಲೇ ಓಡಾತ್ತಿರೋ ಮಕ್ಕಳು, ಮಹಿಳೆಯರು.. ವಾಮಾಚಾರಕ್ಕಿಳಿದವರ ವಿರುದ್ಧ ಕ್ರಮಕ್ಕೆ ಒತ್ತಾಐಇಸುತ್ತಿರೋ ಜನ.. ಈ ದೃಶ್ಯ ಕಂಡು ಬಂದಿದ್ದು ಮುಳುಗಡೆ ನಗರಿ ಬಾಗಲಕೋಟೆಯಲ್ಲಿ. ಕಳೆದೊಂದು ವರ್ಷದಿಂದ ಇಲ್ಲಿ ವಾಮಾಚಾರಗಳು (Black magic) ನಡೆಯುತ್ತಿವೆ. ಅದ್ರಲ್ಲೂ ಇತ್ತೀಚೆಗೆ ಅತಿಯಾಗಿದೆ. ಮುಖ್ಯವಾಗಿ ವಿದ್ಯಾಗಿರಿ ಮತ್ತು ನವನಗರಗಳಲ್ಲಿ ಮೂರು ರಸ್ತೆಗಳು ಸಂಧಿಸುವ ಸ್ಥಳದಲ್ಲಿ ಕರಿ ಬಟ್ಟೆಯ ಬೊಂಬೆಗಳು(Dolls), ಕುಂಕುಮ ಹಚ್ಚಿದ ಗಂಟು, ಬಾಳೆಹಣ್ಣು ಹೀಗೆ ವಿವಿಧ ವಸ್ತುಗಳನ್ನ ನಡುರಸ್ತೆಯಲ್ಲಿಯೇ ಇರಿಸಿ ವಾಮಾಚಾರ ನಡೆಸುತ್ತಿದ್ದಾರೆ. ಇವರ ಮೌಢ್ಯ ಆಚರಣೆಯಿಂದ ಜನ ರಸ್ತೆಗಳಲ್ಲಿ ಓಡಾಡೋಕು ಭಯ ಪಡುತ್ತಿದ್ದಾರೆ. ನಿತ್ಯ ಮಕ್ಕಳು ಇದೆ ರಸ್ತೆ ಮಾರ್ಗವಾಗೆ ಶಾಲೆ, ಹಾಸ್ಟೆಲ್‌ಗಳಿಗೆ ಓಡಾಡಬೇಕು. ಚಿಕ್ಕ ಮಕ್ಕಳಲ್ಲಿ ಇಂಥ ಮಾಟ, ಮಂತ್ರ, ವಾಮಾಚಾರದ ದೃಶ್ಯಗಳು ಭಯ ಹುಟ್ಟಿಸುತ್ತಿವೆ. ಇನ್ನು ಸಂಜೆ ಹೊತ್ತಲ್ಲಿ ಮಹಿಳೆಯರು(womens) ಅಷ್ಟೇ ಅಲ್ಲ ಪುರುಷರು ಕೂಡ ಈ ರಸ್ತೆಗಳಲ್ಲಿ ತಿರುಗಾಡಲು ಹಿಂಜರಿಕೆಯಿಂದಲೇ ಹೆಜ್ಜೆ ಇಡುತ್ತಿದ್ದಾರೆ. ಹೀಗಾಗಿ ಈ ವಾಮಾಚಾರಗಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಪಾಲಿಕೆ ಯಡವಟ್ಟಿಗೆ ಜನ ಜೀವನ ಅಸ್ತವ್ಯಸ್ತ: ರಸ್ತೆಯನ್ನೇ ಪಾರ್ಕ್ ಮಾಡಲು ಮುಂದಾದ ಪಾಲಿಕೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more