BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

Suvarna News   | Asianet News
Published : Feb 06, 2022, 09:47 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನದಲ್ಲಿ 3 ಬಿಎಂಟಿಸಿ ಬಸ್‌ಗಳು (BMTC Bus) ಬೆಂಕಿಗಾಹುತಿಯಾಗಿವೆ. ಪ್ರಯಾಣಿಕರು ಬಸ್‌ನಲ್ಲಿರುವಾಗಲೇ ಬೆಂಕಿ ಹತ್ತಿದ್ದು, ಇದರಿಂದ ಬಿಎಂಟಿಸಿ ಬಸ್ ಹತ್ತಲು ಇದೀಗ ಪ್ರಯಾಣಿಕರು ಭಯ ಪಡುತ್ತಿದ್ದಾರೆ.

ಬೆಂಗಳೂರು (ಫೆ.06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನದಲ್ಲಿ 3 ಬಿಎಂಟಿಸಿ ಬಸ್‌ಗಳು (BMTC Bus) ಬೆಂಕಿಗಾಹುತಿಯಾಗಿವೆ. ಪ್ರಯಾಣಿಕರು (Passengers) ಬಸ್‌ನಲ್ಲಿರುವಾಗಲೇ ಬೆಂಕಿ ಹತ್ತಿದ್ದು, ಇದರಿಂದ ಬಿಎಂಟಿಸಿ ಬಸ್ ಹತ್ತಲು ಇದೀಗ ಪ್ರಯಾಣಿಕರು ಭಯ ಪಡುತ್ತಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ಇರುವ ಕಳಪೆ ಬಿಡಿಭಾಗಗಳೇ ಅವಘಡಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಮೆಕ್ಯಾನಿಕ್‌ಗಳಿಂದಲೇ ಅಶೋಕ್ ಲೆ-ಲ್ಯಾಂಡ್ ಕಂಪನಿ ಬಸ್‌ಗಳ ನಿರ್ವಹಣೆಯಾಗುತ್ತಿದ್ದು, ಕಳಪೆ ಬಿಡಿ ಭಾಗಗಳನ್ನು ಅಳವಡಿಸಿ ಎಡವಟ್ಟು ಮಾಡಿದ್ದಾರೆ. ಮಾತ್ರವಲ್ಲದೇ ಅಧಿಕಾರಿಗಳ ಹಣದಾಸೆಗೆ 43ಕ್ಕೂ ಹೆಚ್ಚು ಬಸ್‌ಗಳು ಮೂಲೆ ಸೇರಿವೆ. 

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಇನ್ನು, ಬಿಎಂಟಿಸಿ ಪ್ರಯಾಣಿಕರ ರಕ್ಷಣೆಗೆ ಮೀಸಲಿಟ್ಟಿದ್ದ ಪ್ರಥಮ ಚಿಕಿತ್ಸಾ ಪೆಟ್ಟಿಗೆ (First Aid Box) ಮಂಗಮಾಯವಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಈ ಸಂದರ್ಭದಲ್ಲಿ ಬಿಎಂಟಿಸಿ ಬಂಡವಾಳ ಬಯಲಾಗಿದೆ. ರೂಲ್ಸ್ ಪ್ರಕಾರ ಬಿಎಂಟಿಸಿ ಬಸ್‌ನಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಲೇಬೇಕು. ಆದರೆ ಸಾವಿರಾರು ಜನರು ಪ್ರಯಾಣಿಸುವ ಬಸ್‌ನಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಲ್ಲ. ಕೆಲವು ಬಸ್‌ಗಳಲ್ಲಿ ಪೆಟ್ಟಿಗೆ ಇದ್ದರೂ ಕಾಟನ್, ಬ್ಯಾಂಡೇಜ್ ಸೇರಿದಂತೆ ಬೇಕಾಗಿರುವ ವಸ್ತುಗಳು ಸಿಗುವುದಿಲ್ಲ. ಬಾಕ್ಸ್‌ಗಳನ್ನು ತೆರೆದು ನೋಡಿದರೆ ಹಳೇ ಬಟ್ಟೆಗಳ ಪೀಸ್‌ಗಳು ಸಿಗುತ್ತವೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more