BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

Suvarna News   | Asianet News
Published : Feb 06, 2022, 09:47 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನದಲ್ಲಿ 3 ಬಿಎಂಟಿಸಿ ಬಸ್‌ಗಳು (BMTC Bus) ಬೆಂಕಿಗಾಹುತಿಯಾಗಿವೆ. ಪ್ರಯಾಣಿಕರು ಬಸ್‌ನಲ್ಲಿರುವಾಗಲೇ ಬೆಂಕಿ ಹತ್ತಿದ್ದು, ಇದರಿಂದ ಬಿಎಂಟಿಸಿ ಬಸ್ ಹತ್ತಲು ಇದೀಗ ಪ್ರಯಾಣಿಕರು ಭಯ ಪಡುತ್ತಿದ್ದಾರೆ.

ಬೆಂಗಳೂರು (ಫೆ.06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನದಲ್ಲಿ 3 ಬಿಎಂಟಿಸಿ ಬಸ್‌ಗಳು (BMTC Bus) ಬೆಂಕಿಗಾಹುತಿಯಾಗಿವೆ. ಪ್ರಯಾಣಿಕರು (Passengers) ಬಸ್‌ನಲ್ಲಿರುವಾಗಲೇ ಬೆಂಕಿ ಹತ್ತಿದ್ದು, ಇದರಿಂದ ಬಿಎಂಟಿಸಿ ಬಸ್ ಹತ್ತಲು ಇದೀಗ ಪ್ರಯಾಣಿಕರು ಭಯ ಪಡುತ್ತಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ಇರುವ ಕಳಪೆ ಬಿಡಿಭಾಗಗಳೇ ಅವಘಡಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಮೆಕ್ಯಾನಿಕ್‌ಗಳಿಂದಲೇ ಅಶೋಕ್ ಲೆ-ಲ್ಯಾಂಡ್ ಕಂಪನಿ ಬಸ್‌ಗಳ ನಿರ್ವಹಣೆಯಾಗುತ್ತಿದ್ದು, ಕಳಪೆ ಬಿಡಿ ಭಾಗಗಳನ್ನು ಅಳವಡಿಸಿ ಎಡವಟ್ಟು ಮಾಡಿದ್ದಾರೆ. ಮಾತ್ರವಲ್ಲದೇ ಅಧಿಕಾರಿಗಳ ಹಣದಾಸೆಗೆ 43ಕ್ಕೂ ಹೆಚ್ಚು ಬಸ್‌ಗಳು ಮೂಲೆ ಸೇರಿವೆ. 

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಇನ್ನು, ಬಿಎಂಟಿಸಿ ಪ್ರಯಾಣಿಕರ ರಕ್ಷಣೆಗೆ ಮೀಸಲಿಟ್ಟಿದ್ದ ಪ್ರಥಮ ಚಿಕಿತ್ಸಾ ಪೆಟ್ಟಿಗೆ (First Aid Box) ಮಂಗಮಾಯವಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಈ ಸಂದರ್ಭದಲ್ಲಿ ಬಿಎಂಟಿಸಿ ಬಂಡವಾಳ ಬಯಲಾಗಿದೆ. ರೂಲ್ಸ್ ಪ್ರಕಾರ ಬಿಎಂಟಿಸಿ ಬಸ್‌ನಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಲೇಬೇಕು. ಆದರೆ ಸಾವಿರಾರು ಜನರು ಪ್ರಯಾಣಿಸುವ ಬಸ್‌ನಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಲ್ಲ. ಕೆಲವು ಬಸ್‌ಗಳಲ್ಲಿ ಪೆಟ್ಟಿಗೆ ಇದ್ದರೂ ಕಾಟನ್, ಬ್ಯಾಂಡೇಜ್ ಸೇರಿದಂತೆ ಬೇಕಾಗಿರುವ ವಸ್ತುಗಳು ಸಿಗುವುದಿಲ್ಲ. ಬಾಕ್ಸ್‌ಗಳನ್ನು ತೆರೆದು ನೋಡಿದರೆ ಹಳೇ ಬಟ್ಟೆಗಳ ಪೀಸ್‌ಗಳು ಸಿಗುತ್ತವೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more