BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

BMTC ಅಗ್ನಿ ಅವಘಡ: ಬಸ್‌ನಲ್ಲಿ ಹೋಗೋ ಮುನ್ನ ಈ ಸ್ಟೋರಿ ನೋಡಿ!

Suvarna News   | Asianet News
Published : Feb 06, 2022, 09:47 AM IST

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನದಲ್ಲಿ 3 ಬಿಎಂಟಿಸಿ ಬಸ್‌ಗಳು (BMTC Bus) ಬೆಂಕಿಗಾಹುತಿಯಾಗಿವೆ. ಪ್ರಯಾಣಿಕರು ಬಸ್‌ನಲ್ಲಿರುವಾಗಲೇ ಬೆಂಕಿ ಹತ್ತಿದ್ದು, ಇದರಿಂದ ಬಿಎಂಟಿಸಿ ಬಸ್ ಹತ್ತಲು ಇದೀಗ ಪ್ರಯಾಣಿಕರು ಭಯ ಪಡುತ್ತಿದ್ದಾರೆ.

ಬೆಂಗಳೂರು (ಫೆ.06): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 15 ದಿನದಲ್ಲಿ 3 ಬಿಎಂಟಿಸಿ ಬಸ್‌ಗಳು (BMTC Bus) ಬೆಂಕಿಗಾಹುತಿಯಾಗಿವೆ. ಪ್ರಯಾಣಿಕರು (Passengers) ಬಸ್‌ನಲ್ಲಿರುವಾಗಲೇ ಬೆಂಕಿ ಹತ್ತಿದ್ದು, ಇದರಿಂದ ಬಿಎಂಟಿಸಿ ಬಸ್ ಹತ್ತಲು ಇದೀಗ ಪ್ರಯಾಣಿಕರು ಭಯ ಪಡುತ್ತಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ಇರುವ ಕಳಪೆ ಬಿಡಿಭಾಗಗಳೇ ಅವಘಡಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಮೆಕ್ಯಾನಿಕ್‌ಗಳಿಂದಲೇ ಅಶೋಕ್ ಲೆ-ಲ್ಯಾಂಡ್ ಕಂಪನಿ ಬಸ್‌ಗಳ ನಿರ್ವಹಣೆಯಾಗುತ್ತಿದ್ದು, ಕಳಪೆ ಬಿಡಿ ಭಾಗಗಳನ್ನು ಅಳವಡಿಸಿ ಎಡವಟ್ಟು ಮಾಡಿದ್ದಾರೆ. ಮಾತ್ರವಲ್ಲದೇ ಅಧಿಕಾರಿಗಳ ಹಣದಾಸೆಗೆ 43ಕ್ಕೂ ಹೆಚ್ಚು ಬಸ್‌ಗಳು ಮೂಲೆ ಸೇರಿವೆ. 

ಕರ್ನಾಟಕದಲ್ಲೇ ಕನ್ನಡಕ್ಕೆ ಅವಮಾನ: ಪಬ್‌ನಲ್ಲಿ ಕನ್ನಡಿಗರ ಮೇಲೆ ಅನ್ಯಭಾಷಿಕರ ಧಮ್ಕಿ..?

ಇನ್ನು, ಬಿಎಂಟಿಸಿ ಪ್ರಯಾಣಿಕರ ರಕ್ಷಣೆಗೆ ಮೀಸಲಿಟ್ಟಿದ್ದ ಪ್ರಥಮ ಚಿಕಿತ್ಸಾ ಪೆಟ್ಟಿಗೆ (First Aid Box) ಮಂಗಮಾಯವಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಈ ಸಂದರ್ಭದಲ್ಲಿ ಬಿಎಂಟಿಸಿ ಬಂಡವಾಳ ಬಯಲಾಗಿದೆ. ರೂಲ್ಸ್ ಪ್ರಕಾರ ಬಿಎಂಟಿಸಿ ಬಸ್‌ನಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇರಲೇಬೇಕು. ಆದರೆ ಸಾವಿರಾರು ಜನರು ಪ್ರಯಾಣಿಸುವ ಬಸ್‌ನಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಲ್ಲ. ಕೆಲವು ಬಸ್‌ಗಳಲ್ಲಿ ಪೆಟ್ಟಿಗೆ ಇದ್ದರೂ ಕಾಟನ್, ಬ್ಯಾಂಡೇಜ್ ಸೇರಿದಂತೆ ಬೇಕಾಗಿರುವ ವಸ್ತುಗಳು ಸಿಗುವುದಿಲ್ಲ. ಬಾಕ್ಸ್‌ಗಳನ್ನು ತೆರೆದು ನೋಡಿದರೆ ಹಳೇ ಬಟ್ಟೆಗಳ ಪೀಸ್‌ಗಳು ಸಿಗುತ್ತವೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more