ಕಾಂತಾರ ಕತೆಯನ್ನೇ ಹೋಲುತ್ತದೆ ಉಡುಪಿ ವಿವೇಕಾನಂದನ ಕತೆ..!

ಕಾಂತಾರ ಕತೆಯನ್ನೇ ಹೋಲುತ್ತದೆ ಉಡುಪಿ ವಿವೇಕಾನಂದನ ಕತೆ..!

Published : Sep 27, 2023, 11:39 AM IST

ಕಾಂತರ ಸಿನಿಮಾ ಕತೆಯನ್ನೇ ಹೋಲುವ ನಿಜ ಪ್ರಸಂಗಕ್ಕೆ ಉಡುಪಿ ಜಿಲ್ಲೆ ಸಾಕ್ಷಿಯಾಗಿದೆ. ಇದು ಕಟ್ಟು ಕತೆ ಎನಿಸಿದ್ರು ಕಟ್ಟುಕಥೆಯಲ್ಲ. ತರ್ಕಕ್ಕೆ ನಿಲುಕದ ಸಂಗತಿಯಾದ್ರೂ ನಡೆದಿದ್ದು ಮಾತ್ರ ಸುಳ್ಳಲ್ಲ.
 

ಬಾಲಕನೋರ್ವನನ್ನು ಮೆರವಣಿಗೆ ಮಾಡಲಾಗ್ತಿದೆ. ಬಾಲಕನ ಜತೆಗೆ ಶ್ವಾನ(Dog) ಇರೋದನ್ನು ಕೂಡ ನೀವು ಗಮನಿಸಬೇಕು. ಯಾಕೆ ಈ ಮೆರವಣಿಗೆ ಅಂತ ನೋಡೋದಾದ್ರೆ ಅದೊಂದು ಅಚ್ಚರಿ. ಊಹೆಗೂ ನಿಲುಕದ ಕಥೆಯೊಂದು ತೆರೆದುಕೊಳ್ಳುತ್ತೆ. ಕಾಂತಾರ (Kantara)ಸಿನಿಮಾ ನಿಮಗೆಲ್ಲ ಗೊತ್ತೇ ಇರುತ್ತೆ. ಕರಾವಳಿಯ ಸೊಬಗನ್ನು ವಿಶ್ವಕ್ಕೆ ಪರಿಚಯಸಿದ ಸಿನಿಮಾವದು. ತುಳುನಾಡ ಮಂದಿಯ ದೈವಭಕ್ತಿಯ ಪರಾಕಾಷ್ಠೆಯ ಪ್ರತೀಕವೂ ಹೌದು, ಇದ್ಯಾಕೆ ಸಿನಿಮಾ ಬಗ್ಗೆ ಹೇಳ್ತಿದ್ದಾರೆ ಅಂತೀರಾ. ಈ ಕಾಂತಾರ ಸಿನಿಮಾಗೂ ಮತ್ತು ಈ ಯುವಕನ ಕತೆಗೂ ದೈವದ(Daiva) ನಂಟಿದೆ ಎಂದೇ ಹೇಳಲಾಗ್ತಿದೆ. ಈ ಯುವಕನ ಹೆಸರು ವಿವೇಕಾನಂದ. ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ತೊಂಬಟ್ಟಿನ ನಿವಾಸಿ ಶೀನ ನಾಯ್ಕ ಎಂಬುವರ ಪುತ್ರ. ಇದೇ ವಿವೇಕಾನಂದನ(Vivekananda) ಬದುಕಲ್ಲಿ 10 ದಿನಗಳ ಹಿಂದಷ್ಟೇ ಒಂದು ಘಟನೆ ಸಂಭವಿಸಿತ್ತು.

ವಿವೇಕಾನಂದ ಇದ್ದಕ್ಕಿದ್ದಂತೆ ಸೆಪ್ಟೆಂಬರ್ 16ರಂದು ದಟ್ಟಡವಿಯಲ್ಲಿ ಕಾಣೆಯಾಗಿದ್ದ, ಈತನ ಜತೆಗೆ ಪಿಂಟು ಎಂಬ ಸಾಕು ನಾಯಿಯೂ ಕಾಣೆಯಾಗಿತ್ತು. ಗಾಬರಿಗೊಂಡ ಕುಟುಂಬಸ್ಥರು ಹುಡುಕದ ಜಾಗವೇ ಇರಲಿಲ್ಲ. ಹೊತ್ತು ಕಳೆದು ಸಂಜೆಯಾದರೂ ಮಗನ ಗುರುತೇ ಸಿಗದಿದ್ದಾಗ ಪೋಷಕರು ಪೊಲೀಸರಿಗೆ ತಿಳಿಸಿದ್ರು. ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿಯೂ ಕಾಡಿನ ಕಾನನಗಳಲ್ಲಿ ಶೋಧಕ್ಕಿಳಿದಿದ್ರು. ಹಗಲು-ರಾತ್ರಿ ಎನ್ನದೇ ದಟ್ಟಡವಿಯಲ್ಲಿ ಸುತ್ತಿದ್ರು. ಎಷ್ಟೆಲ್ಲ ಪ್ರಯತ್ನ ಪಟ್ಟರೂ ನೋ ಯೂಸ್. ವಿವೇಕಾನಂದ ಮಾತ್ರ ಪತ್ತೆಯಾಗಿರಲಿಲ್ಲ. ಕಾಡಲ್ಲಿ ಚಿರತೆಗಳೇ ಜಾಸ್ತಿ ಇರೋದ್ರಿಂದ ವಿವೇಕಾನಂದ ಚಿರತೆ ಬಾಯಿಗೆ ತುತ್ತಾಗಿರಬಹುದು ಅಂತಲೇ ಎಲ್ಲರೂ ಕೈಚಲ್ಲಿದ್ರು. ವಿವೇಕಾನಂದನ ಪೋಷಕರು ಇಷ್ಟಕ್ಕೆ ಸುಮ್ಮನಾಗಿರಲಿಲ್ಲ. ದೈವದ ಮೊರೆ ಹೋಗಿದ್ರು.

ಕೊರಗಜ್ಜನ ಸನ್ನಿಧಿಯಲ್ಲೂ ಹರಕೆ ಹೊತ್ತಿದ್ರು. ದೈವಿವಾಣಿ ನುಡಿಯುತ್ತಿದ್ದ ಮಹಿಳೆಯೊಬ್ಬರು ಬಳಿಯೂ ವಿವೇಕಾನಂದನ ಬಗ್ಗೆ ಕೇಳಿದ್ರು.. ಮಹಿಳೆಯಿಂದ ವಿವೇಕಾನಂದನ ಪೋಷಕರಿಗೆ ನೆಮ್ಮದಿಯ ಭರವಸೆ ದೊರಕಿತ್ತು. ವಿವೇಕಾನಂದ ಬದುಕಿದ್ದಾನೆ. ನಿಮ್ಮ ಗದ್ದೆಯಲ್ಲಿರೋ ದೈವದ ಕಲ್ಲನ್ನು ಪೂಜೆ ಮಾಡಿದ್ರೆ ಮಗ ಮತ್ತೆ ಬರ್ತಾನೆ ಎಂದಿದ್ರಂತೆ. ವಿವೇಕಾನಂದನ ಪೋಷಕರ ಪ್ರಾರ್ಥನೆ ಫಲಿಸಿತ್ತು. ಕಾಡಲ್ಲಿ ಕಾಣೆಯಾಗಿದ್ದ ಮಗ ವಾಪಸ್ಸಾಗಿದ್ದ, ಮಗನ ಜೊತೆಗೆ ಶ್ವಾನವೂ ಮರಳಿ ಬಂದಿತ್ತು. ಸುದ್ದಿ ತಿಳಿದ ಗ್ರಾಮಸ್ಥರೆಲ್ಲ ಇದು ದೈವ ಪವಾಡವೇ ಅಂದಿದ್ರು. ದಟ್ಟಡವಿಯಲ್ಲಿ ವ್ಯಾಘ್ರಗಳ ಅಟ್ಟಹಾಸದ ಮಧ್ಯೆಯೂ 10 ದಿನ ಕಳೆದು ಸುರಕ್ಷಿತವಾಗಿ ಬಂದ ಯುವಕ ಮತ್ತು ಶ್ವಾನವನ್ನು ಗ್ರಾಮಸ್ಥರು ಮೆರವಣಿಗೆ ನಡೆಸಿದ್ರು.

ಇದನ್ನೂ ವೀಕ್ಷಿಸಿ:  ಮಲಗಿದ್ದ ಮಗು ಮೇಲೆ ಬಿದ್ದ ಕಲ್ಲು, ಕಂದಮ್ಮ ಸಾವು: 2 ಲಕ್ಷ ರೂ.ನೆರವು ನೀಡಿದ ಸಚಿವ ಜಮೀರ್ ಅಹ್ಮದ್

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more