ಸಾವಿನಲ್ಲೂ ಸಾರ್ಥಕತೆ... ಆರು ಜನರ ಬಾಳಿಗೆ ಬೆಳಕಾದ ದರ್ಶನ್‌

ಸಾವಿನಲ್ಲೂ ಸಾರ್ಥಕತೆ... ಆರು ಜನರ ಬಾಳಿಗೆ ಬೆಳಕಾದ ದರ್ಶನ್‌

Suvarna News   | Asianet News
Published : Jan 21, 2022, 06:20 PM IST

ಮೈಸೂರಿನಿಂದ ಚೆನ್ನೈಗೆ ಜೀವಂತ ಹೃದಯ ರವಾನೆ

ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು  ದಾನ ಮಾಡಲಾಗಿದ್ದು,  ನಗರದ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ಜೀವಂತ ಹೃದಯವನ್ನು ರವಾನೆ ಮಾಡಲಾಗಿದೆ. 24 ವರ್ಷದ ದರ್ಶನ್ ಎಂಬ ಯುವಕ ಜ.18ರಂದು ರಸ್ತೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಅಪಘಾತದ ರಭಸಕ್ಕೆ ಯುವಕನ ಬ್ರೈನ್‌ ಡೆಡ್ ಆಗಿದೆ ಎಂದು ವೈದ್ಯರು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಯುವಕನ ಮನೆಯವರು ಅಂಗಾಂಗ ದಾನಕ್ಕೆ ಮುಂದಾಗಿದ್ದು,  ದರ್ಶನ್‌ ಹೃದಯವನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಮೂಲಕ ಚೆನ್ನೈಗೆ ಏರ್ ಲಿಫ್ಟ್ ಮಾಡಲಾಯಿತು. 

ಚೆನ್ನೈನ ಎಂ.ಜಿ.ಎಂ ಹೆಲ್ತ್ ಕೇರ್‌ಗೆ ಈ ಜೀವಂತ ಹೃದಯ ರವಾನೆ ಮಾಡಲಾಗಿದ್ದು, ಇದಕ್ಕಾಗಿ ಆಂಬುಲೆನ್ಸ್ ತೆರಳಲು ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು. ಮೈಸೂರಿನಲ್ಲಿ ವಾಸವಾಗಿದ್ದ ದರ್ಶನ್ ಮೂಲತಃ ಗುಂಡ್ಲುಪೇಟೆಯವರಾಗಿದ್ದರು. ಮೈಸೂರಿನ ಬೆಳವಾಡಿಯಲ್ಲಿ ಎಲೆಕ್ಟ್ರಿಕಲ್ ಕೆಲಸ ನಿರ್ವಹಿಸುತ್ತಿದ್ದ ದರ್ಶನ್‌ಗೆ ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದು, ಎರಡು ತಿಂಗಳ ಮಗುವಿದೆ. ಅಂಗಾಂಗವಲ್ಲದೇ ಕಣ್ಣುಗಳನ್ನು ಹಾಗೂ ದೇಹದ ಇತರ ಭಾಗಗಳನ್ನು ಕೂಡ ದಾನ ಮಾಡಿರುವ ದರ್ಶನ್‌  ಆರು ಜನರ ಬಾಳಿಗೆ ಬೆಳಕಾಗಿದ್ದಾರೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more