ಸಾವಿನಲ್ಲೂ ಸಾರ್ಥಕತೆ... ಆರು ಜನರ ಬಾಳಿಗೆ ಬೆಳಕಾದ ದರ್ಶನ್‌

ಸಾವಿನಲ್ಲೂ ಸಾರ್ಥಕತೆ... ಆರು ಜನರ ಬಾಳಿಗೆ ಬೆಳಕಾದ ದರ್ಶನ್‌

Suvarna News   | Asianet News
Published : Jan 21, 2022, 06:20 PM IST

ಮೈಸೂರಿನಿಂದ ಚೆನ್ನೈಗೆ ಜೀವಂತ ಹೃದಯ ರವಾನೆ

ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು  ದಾನ ಮಾಡಲಾಗಿದ್ದು,  ನಗರದ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ಜೀವಂತ ಹೃದಯವನ್ನು ರವಾನೆ ಮಾಡಲಾಗಿದೆ. 24 ವರ್ಷದ ದರ್ಶನ್ ಎಂಬ ಯುವಕ ಜ.18ರಂದು ರಸ್ತೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಅಪಘಾತದ ರಭಸಕ್ಕೆ ಯುವಕನ ಬ್ರೈನ್‌ ಡೆಡ್ ಆಗಿದೆ ಎಂದು ವೈದ್ಯರು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಯುವಕನ ಮನೆಯವರು ಅಂಗಾಂಗ ದಾನಕ್ಕೆ ಮುಂದಾಗಿದ್ದು,  ದರ್ಶನ್‌ ಹೃದಯವನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಮೂಲಕ ಚೆನ್ನೈಗೆ ಏರ್ ಲಿಫ್ಟ್ ಮಾಡಲಾಯಿತು. 

ಚೆನ್ನೈನ ಎಂ.ಜಿ.ಎಂ ಹೆಲ್ತ್ ಕೇರ್‌ಗೆ ಈ ಜೀವಂತ ಹೃದಯ ರವಾನೆ ಮಾಡಲಾಗಿದ್ದು, ಇದಕ್ಕಾಗಿ ಆಂಬುಲೆನ್ಸ್ ತೆರಳಲು ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು. ಮೈಸೂರಿನಲ್ಲಿ ವಾಸವಾಗಿದ್ದ ದರ್ಶನ್ ಮೂಲತಃ ಗುಂಡ್ಲುಪೇಟೆಯವರಾಗಿದ್ದರು. ಮೈಸೂರಿನ ಬೆಳವಾಡಿಯಲ್ಲಿ ಎಲೆಕ್ಟ್ರಿಕಲ್ ಕೆಲಸ ನಿರ್ವಹಿಸುತ್ತಿದ್ದ ದರ್ಶನ್‌ಗೆ ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದು, ಎರಡು ತಿಂಗಳ ಮಗುವಿದೆ. ಅಂಗಾಂಗವಲ್ಲದೇ ಕಣ್ಣುಗಳನ್ನು ಹಾಗೂ ದೇಹದ ಇತರ ಭಾಗಗಳನ್ನು ಕೂಡ ದಾನ ಮಾಡಿರುವ ದರ್ಶನ್‌  ಆರು ಜನರ ಬಾಳಿಗೆ ಬೆಳಕಾಗಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more