ಸಾವಿನಲ್ಲೂ ಸಾರ್ಥಕತೆ... ಆರು ಜನರ ಬಾಳಿಗೆ ಬೆಳಕಾದ ದರ್ಶನ್‌

ಸಾವಿನಲ್ಲೂ ಸಾರ್ಥಕತೆ... ಆರು ಜನರ ಬಾಳಿಗೆ ಬೆಳಕಾದ ದರ್ಶನ್‌

Suvarna News   | Asianet News
Published : Jan 21, 2022, 06:20 PM IST

ಮೈಸೂರಿನಿಂದ ಚೆನ್ನೈಗೆ ಜೀವಂತ ಹೃದಯ ರವಾನೆ

ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು  ದಾನ ಮಾಡಲಾಗಿದ್ದು,  ನಗರದ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ಜೀವಂತ ಹೃದಯವನ್ನು ರವಾನೆ ಮಾಡಲಾಗಿದೆ. 24 ವರ್ಷದ ದರ್ಶನ್ ಎಂಬ ಯುವಕ ಜ.18ರಂದು ರಸ್ತೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಅಪಘಾತದ ರಭಸಕ್ಕೆ ಯುವಕನ ಬ್ರೈನ್‌ ಡೆಡ್ ಆಗಿದೆ ಎಂದು ವೈದ್ಯರು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಯುವಕನ ಮನೆಯವರು ಅಂಗಾಂಗ ದಾನಕ್ಕೆ ಮುಂದಾಗಿದ್ದು,  ದರ್ಶನ್‌ ಹೃದಯವನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಮೂಲಕ ಚೆನ್ನೈಗೆ ಏರ್ ಲಿಫ್ಟ್ ಮಾಡಲಾಯಿತು. 

ಚೆನ್ನೈನ ಎಂ.ಜಿ.ಎಂ ಹೆಲ್ತ್ ಕೇರ್‌ಗೆ ಈ ಜೀವಂತ ಹೃದಯ ರವಾನೆ ಮಾಡಲಾಗಿದ್ದು, ಇದಕ್ಕಾಗಿ ಆಂಬುಲೆನ್ಸ್ ತೆರಳಲು ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು. ಮೈಸೂರಿನಲ್ಲಿ ವಾಸವಾಗಿದ್ದ ದರ್ಶನ್ ಮೂಲತಃ ಗುಂಡ್ಲುಪೇಟೆಯವರಾಗಿದ್ದರು. ಮೈಸೂರಿನ ಬೆಳವಾಡಿಯಲ್ಲಿ ಎಲೆಕ್ಟ್ರಿಕಲ್ ಕೆಲಸ ನಿರ್ವಹಿಸುತ್ತಿದ್ದ ದರ್ಶನ್‌ಗೆ ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದು, ಎರಡು ತಿಂಗಳ ಮಗುವಿದೆ. ಅಂಗಾಂಗವಲ್ಲದೇ ಕಣ್ಣುಗಳನ್ನು ಹಾಗೂ ದೇಹದ ಇತರ ಭಾಗಗಳನ್ನು ಕೂಡ ದಾನ ಮಾಡಿರುವ ದರ್ಶನ್‌  ಆರು ಜನರ ಬಾಳಿಗೆ ಬೆಳಕಾಗಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more