Chamarajanagar: ಕೊಚ್ಚಿ ಹೋದ ಸೇತುವೆ, ಶಾಲಾ-ಮಕ್ಕಳ ಪರದಾಟ

Nov 28, 2021, 9:47 AM IST

ಚಾಮರಾಜನಗರ (ನ. 28): ಗ್ರಾಮಸ್ಥರೇ ನಿರ್ಮಿಸಿದ ಸೇತುವೆಯೊಂದು ಕೊಚ್ಚಿ ಹೋಗಿದೆ. ಶಾಲಾ ಮಕ್ಕಳು ಪರದಾಡುವ ಸ್ಥಿತಿ ಉಂಟಾಗಿದೆ. ಹಲೂರು ತಾಲೂಕಿನ ನಾಗಣ್ಣ ನಗರ ಗ್ರಾಮದಲ್ಲಿ, ತಮ್ಮ ಅನುಕೂಲಕ್ಕಾಗಿ ಸೇತುವೆ ನಿರ್ಮಿಸಿಕೊಂಡಿದ್ದರು. ಸತತ ಮಳೆಯಿಂದ ನೀರು ನುಗ್ಗಿ ಸೇತುವೆ ಕೊಚ್ಚಿಕೊಂಡು ಹೋಗಿದೆ. ಇದೀಗ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಪರದಾಡುತ್ತಿದ್ದಾರೆ.