ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿ ವಿಸ್ತರಣೆ: ತಾಲೂಕಿನ 28 ಗ್ರಾಮಗಳಿಗೆ ಬುಡಾ ನೋಟಿಸ್ !

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿ ವಿಸ್ತರಣೆ: ತಾಲೂಕಿನ 28 ಗ್ರಾಮಗಳಿಗೆ ಬುಡಾ ನೋಟಿಸ್ !

Published : Sep 12, 2023, 09:32 AM IST

ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪ್ರಭಾವಿ ಸಚಿವರು. ಆ ಸಚಿವರು ಪ್ರತಿನಿಧಿಸುವ ಕ್ಷೇತ್ರದ 28 ಗ್ರಾಮಗಳ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅನ್ನದಾತರ ಈ ಆತಂಕಕ್ಕೆ ಕಾರಣ ಬುಡಾ ಜಾರಿಗೊಳಿಸಿರುವ ಆ ಒಂದು ನೋಟಿಸ್. ಬುಡಾದ ನೋಟಿಸ್ ಕೈ ಸೇರುತ್ತಿದ್ದಂತೆ ಆ ಗ್ರಾಮಗಳ ರೈತರು ಹೌಹಾರಿದ್ದಾರೆ.
 

ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಇಬ್ಬರೂ ಬೆಳಗಾವಿ(Belgaum) ಜಿಲ್ಲೆಯ ಪ್ರಭಾವಿ ನಾಯಕರು. ಸಿದ್ದರಾಮಯ್ಯ(Siddaramaiah) ನೇತೃತ್ವದ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ ಲೋಕೋಪಯೋಗಿ ಸಚಿವರಾಗಿದ್ರೆ, ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆಗಿದ್ದಾರೆ. ಆದರೆ ಈ ಇಬ್ಬರು ಸಚಿವರ ತವರು ಕ್ಷೇತ್ರದ ರೈತರು(Farmers) ಸಂಕಷ್ಟಕ್ಕೀಡಾಗಿದ್ದಾರೆ. ಬರೋಬ್ಬರಿ 28 ಗ್ರಾಮಗಳಿಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ. ಕಲಕಾಂಬ, ಅಷ್ಟೇ, ಮುಚ್ಛಂಡಿ, ಕಡೋಲಿ, ಸಾಂಬ್ರಾ, ಮುತಗಾ, ಬಾಳೇಕುಂದ್ರಿ, ಶಿಂಧೋಳಿ ಸೇರಿ ಒಟ್ಟು 28 ಗ್ರಾಮಗಳಿಗೆ ಬುಡಾ ನೋಟಿಸ್ ನೀಡಿದೆ. ಈ ಮೊದಲು 6 ಕಿ.ಮೀನಷ್ಟಿದ್ದ ಬುಡಾ ವ್ಯಾಪ್ತಿ ಇದೀಗ 10 ಕಿಮೀಗೆ ವಿಸ್ತರಣೆ ಆಗಿದೆ. ಕೃಷಿಯೇತರ ಚಟುವಟಿಕೆ ಮಾಡುವುದಾದರೆ ನಮ್ಮ ಅನುಮತಿ ಪಡೆಯಲೇಬೇಕು ಎಂದು ಬುಡಾ(Buda) ತನ್ನ ನೋಟಿಸ್‍ನಲ್ಲಿ ತಿಳಿಸಿದೆ. ಈ ನೋಟಿಸ್ ಕೈ ಸೇರುತ್ತಿದ್ದಂತೆ ಹೌಹಾರಿರುವ ರೈತರು ಬುಡಾ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ನಮ್ಮ ಜಮೀನಿನಲ್ಲಿ ನಾವು ಏನು ಬೇಕಾದರೂ ಮಾಡುತ್ತೇವೆ. ಅದಕ್ಕೆ ಬುಡಾ ಅನುಮತಿ ಏಕೆ ಎಂದು ಪ್ರಶ್ನಿಸ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಜಮೀನಿನಲ್ಲಿ ಕೃಷಿಯೇತರ ಚಟುವಟಿಕೆ ನಡೆಸಬೇಕಾದರೆ ಬುಡಾ ಅನುಮತಿ ಕಡ್ಡಾಯ. ಎನ್.ಎ ಲೇಔಟ್ ಆಗಲಿ, ಯಾವುದೇ ಕಟ್ಟಡ ನಿರ್ಮಾಣಕ್ಕೆ ಬೆಳಗಾವಿ ನಗಾರಾಭಿವೃದ್ಧಿ ಪ್ರಾಧಿಕಾರದ ಅನುಮತಿ ಪಡೆಯಲೇಬೇಕು ಎಂಬುದು ಮೊದಲಿನಿಂದ ಇರುವ ನಿಯಮ. ಸರ್ಕಾರದ ಆದೇಶದಂತೆ ಇದೀಗ ಬುಡಾ ಸ್ಥಳೀಯ ಯೋಜನಾ ಪ್ರದೇಶವನ್ನು ವಿಸ್ತರಣೆಗೆ ಮುಂದಾಗಿದೆ. ಈ ಕುರಿತು ಬುಡಾ ಆಯುಕ್ತರು ಹೇಳೋದು ಹೀಗೆ.

ಇದನ್ನೂ ವೀಕ್ಷಿಸಿ:  ಚರ್ಮವ್ಯಾದಿ , ಸಂತಾನ ಫಲಕ್ಕಾಗಿ ಇಲ್ಲಿದೆ ರಹಸ್ಯ ನಾಗಮಂತ್ರ..! ನೀವು ಆಚರಿಸಬೇಕಾಗಿದ್ದು ಏನು..?

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more