ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿ ವಿಸ್ತರಣೆ: ತಾಲೂಕಿನ 28 ಗ್ರಾಮಗಳಿಗೆ ಬುಡಾ ನೋಟಿಸ್ !

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿ ವಿಸ್ತರಣೆ: ತಾಲೂಕಿನ 28 ಗ್ರಾಮಗಳಿಗೆ ಬುಡಾ ನೋಟಿಸ್ !

Published : Sep 12, 2023, 09:32 AM IST

ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪ್ರಭಾವಿ ಸಚಿವರು. ಆ ಸಚಿವರು ಪ್ರತಿನಿಧಿಸುವ ಕ್ಷೇತ್ರದ 28 ಗ್ರಾಮಗಳ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಅನ್ನದಾತರ ಈ ಆತಂಕಕ್ಕೆ ಕಾರಣ ಬುಡಾ ಜಾರಿಗೊಳಿಸಿರುವ ಆ ಒಂದು ನೋಟಿಸ್. ಬುಡಾದ ನೋಟಿಸ್ ಕೈ ಸೇರುತ್ತಿದ್ದಂತೆ ಆ ಗ್ರಾಮಗಳ ರೈತರು ಹೌಹಾರಿದ್ದಾರೆ.
 

ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಇಬ್ಬರೂ ಬೆಳಗಾವಿ(Belgaum) ಜಿಲ್ಲೆಯ ಪ್ರಭಾವಿ ನಾಯಕರು. ಸಿದ್ದರಾಮಯ್ಯ(Siddaramaiah) ನೇತೃತ್ವದ ಸರ್ಕಾರದಲ್ಲಿ ಸತೀಶ ಜಾರಕಿಹೊಳಿ ಲೋಕೋಪಯೋಗಿ ಸಚಿವರಾಗಿದ್ರೆ, ಲಕ್ಷ್ಮಿ ಹೆಬ್ಬಾಳ್ಕರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆಗಿದ್ದಾರೆ. ಆದರೆ ಈ ಇಬ್ಬರು ಸಚಿವರ ತವರು ಕ್ಷೇತ್ರದ ರೈತರು(Farmers) ಸಂಕಷ್ಟಕ್ಕೀಡಾಗಿದ್ದಾರೆ. ಬರೋಬ್ಬರಿ 28 ಗ್ರಾಮಗಳಿಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ನೋಟಿಸ್ ಜಾರಿ ಮಾಡಿದೆ. ಕಲಕಾಂಬ, ಅಷ್ಟೇ, ಮುಚ್ಛಂಡಿ, ಕಡೋಲಿ, ಸಾಂಬ್ರಾ, ಮುತಗಾ, ಬಾಳೇಕುಂದ್ರಿ, ಶಿಂಧೋಳಿ ಸೇರಿ ಒಟ್ಟು 28 ಗ್ರಾಮಗಳಿಗೆ ಬುಡಾ ನೋಟಿಸ್ ನೀಡಿದೆ. ಈ ಮೊದಲು 6 ಕಿ.ಮೀನಷ್ಟಿದ್ದ ಬುಡಾ ವ್ಯಾಪ್ತಿ ಇದೀಗ 10 ಕಿಮೀಗೆ ವಿಸ್ತರಣೆ ಆಗಿದೆ. ಕೃಷಿಯೇತರ ಚಟುವಟಿಕೆ ಮಾಡುವುದಾದರೆ ನಮ್ಮ ಅನುಮತಿ ಪಡೆಯಲೇಬೇಕು ಎಂದು ಬುಡಾ(Buda) ತನ್ನ ನೋಟಿಸ್‍ನಲ್ಲಿ ತಿಳಿಸಿದೆ. ಈ ನೋಟಿಸ್ ಕೈ ಸೇರುತ್ತಿದ್ದಂತೆ ಹೌಹಾರಿರುವ ರೈತರು ಬುಡಾ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ನಮ್ಮ ಜಮೀನಿನಲ್ಲಿ ನಾವು ಏನು ಬೇಕಾದರೂ ಮಾಡುತ್ತೇವೆ. ಅದಕ್ಕೆ ಬುಡಾ ಅನುಮತಿ ಏಕೆ ಎಂದು ಪ್ರಶ್ನಿಸ್ತಿದ್ದಾರೆ. ನಗರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಜಮೀನಿನಲ್ಲಿ ಕೃಷಿಯೇತರ ಚಟುವಟಿಕೆ ನಡೆಸಬೇಕಾದರೆ ಬುಡಾ ಅನುಮತಿ ಕಡ್ಡಾಯ. ಎನ್.ಎ ಲೇಔಟ್ ಆಗಲಿ, ಯಾವುದೇ ಕಟ್ಟಡ ನಿರ್ಮಾಣಕ್ಕೆ ಬೆಳಗಾವಿ ನಗಾರಾಭಿವೃದ್ಧಿ ಪ್ರಾಧಿಕಾರದ ಅನುಮತಿ ಪಡೆಯಲೇಬೇಕು ಎಂಬುದು ಮೊದಲಿನಿಂದ ಇರುವ ನಿಯಮ. ಸರ್ಕಾರದ ಆದೇಶದಂತೆ ಇದೀಗ ಬುಡಾ ಸ್ಥಳೀಯ ಯೋಜನಾ ಪ್ರದೇಶವನ್ನು ವಿಸ್ತರಣೆಗೆ ಮುಂದಾಗಿದೆ. ಈ ಕುರಿತು ಬುಡಾ ಆಯುಕ್ತರು ಹೇಳೋದು ಹೀಗೆ.

ಇದನ್ನೂ ವೀಕ್ಷಿಸಿ:  ಚರ್ಮವ್ಯಾದಿ , ಸಂತಾನ ಫಲಕ್ಕಾಗಿ ಇಲ್ಲಿದೆ ರಹಸ್ಯ ನಾಗಮಂತ್ರ..! ನೀವು ಆಚರಿಸಬೇಕಾಗಿದ್ದು ಏನು..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more