BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ  ಮಾಲೂರಿನ ಅಂಬೇಡ್ಕರ್ ಭವನ

BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ ಮಾಲೂರಿನ ಅಂಬೇಡ್ಕರ್ ಭವನ

Published : Sep 19, 2022, 03:39 PM IST

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ  92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಇಂದು ಇದು ಪಾಳು ಬಿದ್ದ ಕಟ್ಟಡವಾಗಿ ಅನೈತಿಕ ಚಟುವಟಿಕೆಯ ತಾಣವಾಗಿದೆ.

ಕೋಲಾರ (ಸೆ.19): ಮಾಲೂರು ತಾಲೂಕಿನ 60 ರಿಂದ 70 ಸಾವಿರ ಜನ ದಲಿತ ಸಮುದಾಯಕ್ಕೆ ಸೇರಿರುವವರು ಇದ್ದಾರೆ,ಎಲ್ಲರಿಗೂ ಅನುಕೂಲ ಇರೋದಿಲ್ಲ, ಹೀಗಾಗಿ ಮದುವೆ, ಶುಭಾ ಸಮಾರಂಭ ಮಾಡೋದಕ್ಕೆ ಅನ್ನೋ ಉದ್ದೇಶದಿಂದ 92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಶಾಸಕರಾದ ಕೃಷ್ಣಯ್ಯ ಶೆಟ್ಟಿ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ,ಕೇಂದ್ರ ಸಚಿವರಾಗಿದ್ದ ಕೆ.ಎಚ್ ಮುನಿಯಪ್ಪ ಎಲ್ಲರೂ ಸೇರಿಕೊಂಡು ಕ್ಯಾಮರಾ ಮುಂದೆ ಫೋಸ್ ಕೊಟ್ಟು ಉದ್ಘಾಟನೆ ಮಾಡಿ ಹೋಗಿದ್ದು ಬಿಟ್ರೆ ಇದುವರೆಗೂ ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ. ಇನ್ನು ಆಶ್ಚರ್ಯ ಅಂದ್ರೆ ಹೇಳಿ ಕೇಳಿ ಡಾ. ಬಿ.ಆರ್ ಅಂಬೇಡ್ಕರ್ ನಿಗಮ ಮಂಡಳಿ ಅಧ್ಯಕ್ಷರ ತವರು ಜಿಲ್ಲೆ ಕೋಲಾರದಲ್ಲೇ ಈ ಪರಿಸ್ಥಿತಿ ಇದೆ. ಎಚ್.ನಾಗೇಶ್ ಅವರಿಗೆ ಅದೆಷ್ಟೇ ಬಾರಿ ಮನವಿ ಮಾಡಿದ್ರು ಅದ್ಯಾಕೆ ಕಾಯಕಲ್ಪಕ್ಕೆ ಮುಂದಾಗ್ತಿಲ್ಲೋ ತಿಳಿಯು ತ್ತಿಲ್ಲ.ಇನ್ನು 10 ವರ್ಷಗಳಿಂದ ಇಲ್ಲಿ ಯಾವುದೇ ಕಾರ್ಯಕ್ರಮ ನಡೆಯದೇ ಇರೋದಕ್ಕೆ ಕುಡುಕರಿಗೆ ಮತ್ತು ಅನೈತಿಕಾ ಚಟುವಟಿಕೆ ನಡೆಸುವವರಿಗೆ ಇದು ಅಚ್ಚುಮೆಚ್ಚಿನ ಸ್ಥಳವಾಗಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!