BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ  ಮಾಲೂರಿನ ಅಂಬೇಡ್ಕರ್ ಭವನ

BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ ಮಾಲೂರಿನ ಅಂಬೇಡ್ಕರ್ ಭವನ

Published : Sep 19, 2022, 03:39 PM IST

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ  92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಇಂದು ಇದು ಪಾಳು ಬಿದ್ದ ಕಟ್ಟಡವಾಗಿ ಅನೈತಿಕ ಚಟುವಟಿಕೆಯ ತಾಣವಾಗಿದೆ.

ಕೋಲಾರ (ಸೆ.19): ಮಾಲೂರು ತಾಲೂಕಿನ 60 ರಿಂದ 70 ಸಾವಿರ ಜನ ದಲಿತ ಸಮುದಾಯಕ್ಕೆ ಸೇರಿರುವವರು ಇದ್ದಾರೆ,ಎಲ್ಲರಿಗೂ ಅನುಕೂಲ ಇರೋದಿಲ್ಲ, ಹೀಗಾಗಿ ಮದುವೆ, ಶುಭಾ ಸಮಾರಂಭ ಮಾಡೋದಕ್ಕೆ ಅನ್ನೋ ಉದ್ದೇಶದಿಂದ 92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಶಾಸಕರಾದ ಕೃಷ್ಣಯ್ಯ ಶೆಟ್ಟಿ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ,ಕೇಂದ್ರ ಸಚಿವರಾಗಿದ್ದ ಕೆ.ಎಚ್ ಮುನಿಯಪ್ಪ ಎಲ್ಲರೂ ಸೇರಿಕೊಂಡು ಕ್ಯಾಮರಾ ಮುಂದೆ ಫೋಸ್ ಕೊಟ್ಟು ಉದ್ಘಾಟನೆ ಮಾಡಿ ಹೋಗಿದ್ದು ಬಿಟ್ರೆ ಇದುವರೆಗೂ ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ. ಇನ್ನು ಆಶ್ಚರ್ಯ ಅಂದ್ರೆ ಹೇಳಿ ಕೇಳಿ ಡಾ. ಬಿ.ಆರ್ ಅಂಬೇಡ್ಕರ್ ನಿಗಮ ಮಂಡಳಿ ಅಧ್ಯಕ್ಷರ ತವರು ಜಿಲ್ಲೆ ಕೋಲಾರದಲ್ಲೇ ಈ ಪರಿಸ್ಥಿತಿ ಇದೆ. ಎಚ್.ನಾಗೇಶ್ ಅವರಿಗೆ ಅದೆಷ್ಟೇ ಬಾರಿ ಮನವಿ ಮಾಡಿದ್ರು ಅದ್ಯಾಕೆ ಕಾಯಕಲ್ಪಕ್ಕೆ ಮುಂದಾಗ್ತಿಲ್ಲೋ ತಿಳಿಯು ತ್ತಿಲ್ಲ.ಇನ್ನು 10 ವರ್ಷಗಳಿಂದ ಇಲ್ಲಿ ಯಾವುದೇ ಕಾರ್ಯಕ್ರಮ ನಡೆಯದೇ ಇರೋದಕ್ಕೆ ಕುಡುಕರಿಗೆ ಮತ್ತು ಅನೈತಿಕಾ ಚಟುವಟಿಕೆ ನಡೆಸುವವರಿಗೆ ಇದು ಅಚ್ಚುಮೆಚ್ಚಿನ ಸ್ಥಳವಾಗಿದೆ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್