BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ  ಮಾಲೂರಿನ ಅಂಬೇಡ್ಕರ್ ಭವನ

BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ ಮಾಲೂರಿನ ಅಂಬೇಡ್ಕರ್ ಭವನ

Published : Sep 19, 2022, 03:39 PM IST

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ  92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಇಂದು ಇದು ಪಾಳು ಬಿದ್ದ ಕಟ್ಟಡವಾಗಿ ಅನೈತಿಕ ಚಟುವಟಿಕೆಯ ತಾಣವಾಗಿದೆ.

ಕೋಲಾರ (ಸೆ.19): ಮಾಲೂರು ತಾಲೂಕಿನ 60 ರಿಂದ 70 ಸಾವಿರ ಜನ ದಲಿತ ಸಮುದಾಯಕ್ಕೆ ಸೇರಿರುವವರು ಇದ್ದಾರೆ,ಎಲ್ಲರಿಗೂ ಅನುಕೂಲ ಇರೋದಿಲ್ಲ, ಹೀಗಾಗಿ ಮದುವೆ, ಶುಭಾ ಸಮಾರಂಭ ಮಾಡೋದಕ್ಕೆ ಅನ್ನೋ ಉದ್ದೇಶದಿಂದ 92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಶಾಸಕರಾದ ಕೃಷ್ಣಯ್ಯ ಶೆಟ್ಟಿ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ,ಕೇಂದ್ರ ಸಚಿವರಾಗಿದ್ದ ಕೆ.ಎಚ್ ಮುನಿಯಪ್ಪ ಎಲ್ಲರೂ ಸೇರಿಕೊಂಡು ಕ್ಯಾಮರಾ ಮುಂದೆ ಫೋಸ್ ಕೊಟ್ಟು ಉದ್ಘಾಟನೆ ಮಾಡಿ ಹೋಗಿದ್ದು ಬಿಟ್ರೆ ಇದುವರೆಗೂ ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ. ಇನ್ನು ಆಶ್ಚರ್ಯ ಅಂದ್ರೆ ಹೇಳಿ ಕೇಳಿ ಡಾ. ಬಿ.ಆರ್ ಅಂಬೇಡ್ಕರ್ ನಿಗಮ ಮಂಡಳಿ ಅಧ್ಯಕ್ಷರ ತವರು ಜಿಲ್ಲೆ ಕೋಲಾರದಲ್ಲೇ ಈ ಪರಿಸ್ಥಿತಿ ಇದೆ. ಎಚ್.ನಾಗೇಶ್ ಅವರಿಗೆ ಅದೆಷ್ಟೇ ಬಾರಿ ಮನವಿ ಮಾಡಿದ್ರು ಅದ್ಯಾಕೆ ಕಾಯಕಲ್ಪಕ್ಕೆ ಮುಂದಾಗ್ತಿಲ್ಲೋ ತಿಳಿಯು ತ್ತಿಲ್ಲ.ಇನ್ನು 10 ವರ್ಷಗಳಿಂದ ಇಲ್ಲಿ ಯಾವುದೇ ಕಾರ್ಯಕ್ರಮ ನಡೆಯದೇ ಇರೋದಕ್ಕೆ ಕುಡುಕರಿಗೆ ಮತ್ತು ಅನೈತಿಕಾ ಚಟುವಟಿಕೆ ನಡೆಸುವವರಿಗೆ ಇದು ಅಚ್ಚುಮೆಚ್ಚಿನ ಸ್ಥಳವಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!