BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ  ಮಾಲೂರಿನ ಅಂಬೇಡ್ಕರ್ ಭವನ

BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ ಮಾಲೂರಿನ ಅಂಬೇಡ್ಕರ್ ಭವನ

Published : Sep 19, 2022, 03:39 PM IST

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ  92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಇಂದು ಇದು ಪಾಳು ಬಿದ್ದ ಕಟ್ಟಡವಾಗಿ ಅನೈತಿಕ ಚಟುವಟಿಕೆಯ ತಾಣವಾಗಿದೆ.

ಕೋಲಾರ (ಸೆ.19): ಮಾಲೂರು ತಾಲೂಕಿನ 60 ರಿಂದ 70 ಸಾವಿರ ಜನ ದಲಿತ ಸಮುದಾಯಕ್ಕೆ ಸೇರಿರುವವರು ಇದ್ದಾರೆ,ಎಲ್ಲರಿಗೂ ಅನುಕೂಲ ಇರೋದಿಲ್ಲ, ಹೀಗಾಗಿ ಮದುವೆ, ಶುಭಾ ಸಮಾರಂಭ ಮಾಡೋದಕ್ಕೆ ಅನ್ನೋ ಉದ್ದೇಶದಿಂದ 92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಶಾಸಕರಾದ ಕೃಷ್ಣಯ್ಯ ಶೆಟ್ಟಿ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ,ಕೇಂದ್ರ ಸಚಿವರಾಗಿದ್ದ ಕೆ.ಎಚ್ ಮುನಿಯಪ್ಪ ಎಲ್ಲರೂ ಸೇರಿಕೊಂಡು ಕ್ಯಾಮರಾ ಮುಂದೆ ಫೋಸ್ ಕೊಟ್ಟು ಉದ್ಘಾಟನೆ ಮಾಡಿ ಹೋಗಿದ್ದು ಬಿಟ್ರೆ ಇದುವರೆಗೂ ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ. ಇನ್ನು ಆಶ್ಚರ್ಯ ಅಂದ್ರೆ ಹೇಳಿ ಕೇಳಿ ಡಾ. ಬಿ.ಆರ್ ಅಂಬೇಡ್ಕರ್ ನಿಗಮ ಮಂಡಳಿ ಅಧ್ಯಕ್ಷರ ತವರು ಜಿಲ್ಲೆ ಕೋಲಾರದಲ್ಲೇ ಈ ಪರಿಸ್ಥಿತಿ ಇದೆ. ಎಚ್.ನಾಗೇಶ್ ಅವರಿಗೆ ಅದೆಷ್ಟೇ ಬಾರಿ ಮನವಿ ಮಾಡಿದ್ರು ಅದ್ಯಾಕೆ ಕಾಯಕಲ್ಪಕ್ಕೆ ಮುಂದಾಗ್ತಿಲ್ಲೋ ತಿಳಿಯು ತ್ತಿಲ್ಲ.ಇನ್ನು 10 ವರ್ಷಗಳಿಂದ ಇಲ್ಲಿ ಯಾವುದೇ ಕಾರ್ಯಕ್ರಮ ನಡೆಯದೇ ಇರೋದಕ್ಕೆ ಕುಡುಕರಿಗೆ ಮತ್ತು ಅನೈತಿಕಾ ಚಟುವಟಿಕೆ ನಡೆಸುವವರಿಗೆ ಇದು ಅಚ್ಚುಮೆಚ್ಚಿನ ಸ್ಥಳವಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?