ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

Published : Nov 14, 2023, 11:27 AM IST

ದೇಶಾದ್ಯಂತ ದೀಪಾವಳಿ ಸಂಭ್ರಮ ಸಡಗರ ಜೋರಾಗಿದೆ. ವಿವಿಧ ಸಂಪ್ರದಾಯಗಳ ರಾಜ್ಯ, ಜಿಲ್ಲಾವಾರು ಜನರು ಆಚರಣೆ ಮಾಡ್ತಾರೆ.. ಹಾವೇರಿ ಜಿಲ್ಲೆಯಲ್ಲಿ ನಡೆಯೋ ದೀಪಾವಳಿ ಅಪ್ಪಟ ರೈತಾಪಿ ದೀಪಾವಳಿ ಎಲ್ಲೆಡೆ ಮನಸೂರೆಗೊಳಿಸಿದೆ. 
 

ಹಾವೇರಿ ಜಿಲ್ಲೆ ಉತ್ತರ ಕರ್ನಾಟಕದ ಹೆಬ್ಬಾಗಿಲು. ಅಪ್ಪಟ  ಜವಾರಿ ರೈತರ ಜಿಲ್ಲೆ ಹಾವೇರಿ(Haveri). ಇಲ್ಲಿ ಎತ್ತು ಅಥವಾ ಹೋರಿಗಳು ಅಂದರೆ ಬರೀ ಕೃಷಿ ಕೆಲಸಕ್ಕಲ್ಲದೇ ದೀಪಾವಳಿ(Deepavali) ಹಬ್ಬದಲ್ಲೂ ಕೊಬ್ಬರಿ ಹೋರಿ ಓಡಿಸುವ ಸ್ಫರ್ಧೆ(Bull Race) ಮಾಡಿ ಸಂಭ್ರಮಿಸ್ತಾರೆ. ದೀಪಾವಳಿ ಹಾವೇರಿ ಜಿಲ್ಲೆಯಲ್ಲಿ ಪಟಾಕಿ ಹೊಡೆದು ಸಿಹಿ ತಿನ್ನೋ ಹಬ್ಬ ಅಲ್ಲವೇ ಅಲ್ಲ. ಅದು ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ. ಹಾವೇರಿ ಜಿಲ್ಲೆ ಹೋರಿ ಬೆದರಿಸೋ ಸ್ಪರ್ಧೆಗೆ ಹೆಸರುವಾಸಿ. ಹಾವೇರಿ ಜಿಲ್ಲೆಯ ಕಬ್ಬೂರು, ಕುಳೇನೂರು, ಹೊಸೂರು, ಹಾನಗಲ್, ಹಿರೇನಿಂಗದಹಳ್ಳಿ,  ಹುಲಗಿನಕೊಪ್ಪ, ಮಾರನಬೀಡ, ಚಿಕ್ಕನಿಂಗದಹಳ್ಳಿ ಸೇರಿದಂತೆ ಹಲವು ಕಡೆ ಹೋರಿ ಬೆದರಿಸೋ ಸ್ಪರ್ಧೆ ನಡೆಯುತ್ತೆ. ರೈತರು ಕಷ್ಟಪಟ್ಟು ಸಾಕಿ ಹೋರಿಗಳನ್ನ ಹಬ್ಬಕ್ಕಾಗಿ ತಯಾರು ಮಾಡಿರ್ತಾರೆ. ಭಿನ್ನ-ವಿಭಿನ್ನವಾಗಿ ಹೋರಿಗಳನ್ನ ಅಲಂಕಾರ ಮಾಡಿ ಸ್ಪರ್ಧೆಯಲ್ಲಿ  ಓಡಿಸ್ತಾರೆ.ಕೆಲವೊಂದು ಬಾರಿ ಡೇಂಜರ್ ಅನ್ನಿಸೋ ಕೊಬ್ಬರಿ ಹೋರಿ ಸ್ಪರ್ಧೆಯನ್ನ ಉತ್ತರ ಕರ್ನಾಟಕದ ರೈತರು ಮನರಂಜನೆ ಹಬ್ಬವಾಗಿ ಆಚರಿಸಿಕೊಂಡು ಬರ್ತಿದ್ದಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು, ಕರಾವಳಿ ಭಾಗದಲ್ಲಿ ಕೋಣಗಳ ಕಂಬಳದ ರೀತಿಯಲ್ಲಿಯೇ ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬ, ಹಟ್ಟಿ ಹಬ್ಬ ಭಾರೀ ಫೇಮಸ್.

ಇದನ್ನೂ ವೀಕ್ಷಿಸಿ: ಲಂಬಾಣಿ ತಾಂಡಾಗಳಲ್ಲಿ ವಿಭಿನ್ನ ದೀಪಾವಳಿ ಆಚರಣೆ: ಎಮ್ಮೆಗಳನ್ನು ಅಲಂಕರಿಸಿ, ಗಲ್ಲಿಗಲ್ಲಿಯಲ್ಲಿ ಓಡಿಸಿ ಸಂಭ್ರಮ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more