ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

Published : Nov 14, 2023, 11:27 AM IST

ದೇಶಾದ್ಯಂತ ದೀಪಾವಳಿ ಸಂಭ್ರಮ ಸಡಗರ ಜೋರಾಗಿದೆ. ವಿವಿಧ ಸಂಪ್ರದಾಯಗಳ ರಾಜ್ಯ, ಜಿಲ್ಲಾವಾರು ಜನರು ಆಚರಣೆ ಮಾಡ್ತಾರೆ.. ಹಾವೇರಿ ಜಿಲ್ಲೆಯಲ್ಲಿ ನಡೆಯೋ ದೀಪಾವಳಿ ಅಪ್ಪಟ ರೈತಾಪಿ ದೀಪಾವಳಿ ಎಲ್ಲೆಡೆ ಮನಸೂರೆಗೊಳಿಸಿದೆ. 
 

ಹಾವೇರಿ ಜಿಲ್ಲೆ ಉತ್ತರ ಕರ್ನಾಟಕದ ಹೆಬ್ಬಾಗಿಲು. ಅಪ್ಪಟ  ಜವಾರಿ ರೈತರ ಜಿಲ್ಲೆ ಹಾವೇರಿ(Haveri). ಇಲ್ಲಿ ಎತ್ತು ಅಥವಾ ಹೋರಿಗಳು ಅಂದರೆ ಬರೀ ಕೃಷಿ ಕೆಲಸಕ್ಕಲ್ಲದೇ ದೀಪಾವಳಿ(Deepavali) ಹಬ್ಬದಲ್ಲೂ ಕೊಬ್ಬರಿ ಹೋರಿ ಓಡಿಸುವ ಸ್ಫರ್ಧೆ(Bull Race) ಮಾಡಿ ಸಂಭ್ರಮಿಸ್ತಾರೆ. ದೀಪಾವಳಿ ಹಾವೇರಿ ಜಿಲ್ಲೆಯಲ್ಲಿ ಪಟಾಕಿ ಹೊಡೆದು ಸಿಹಿ ತಿನ್ನೋ ಹಬ್ಬ ಅಲ್ಲವೇ ಅಲ್ಲ. ಅದು ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ. ಹಾವೇರಿ ಜಿಲ್ಲೆ ಹೋರಿ ಬೆದರಿಸೋ ಸ್ಪರ್ಧೆಗೆ ಹೆಸರುವಾಸಿ. ಹಾವೇರಿ ಜಿಲ್ಲೆಯ ಕಬ್ಬೂರು, ಕುಳೇನೂರು, ಹೊಸೂರು, ಹಾನಗಲ್, ಹಿರೇನಿಂಗದಹಳ್ಳಿ,  ಹುಲಗಿನಕೊಪ್ಪ, ಮಾರನಬೀಡ, ಚಿಕ್ಕನಿಂಗದಹಳ್ಳಿ ಸೇರಿದಂತೆ ಹಲವು ಕಡೆ ಹೋರಿ ಬೆದರಿಸೋ ಸ್ಪರ್ಧೆ ನಡೆಯುತ್ತೆ. ರೈತರು ಕಷ್ಟಪಟ್ಟು ಸಾಕಿ ಹೋರಿಗಳನ್ನ ಹಬ್ಬಕ್ಕಾಗಿ ತಯಾರು ಮಾಡಿರ್ತಾರೆ. ಭಿನ್ನ-ವಿಭಿನ್ನವಾಗಿ ಹೋರಿಗಳನ್ನ ಅಲಂಕಾರ ಮಾಡಿ ಸ್ಪರ್ಧೆಯಲ್ಲಿ  ಓಡಿಸ್ತಾರೆ.ಕೆಲವೊಂದು ಬಾರಿ ಡೇಂಜರ್ ಅನ್ನಿಸೋ ಕೊಬ್ಬರಿ ಹೋರಿ ಸ್ಪರ್ಧೆಯನ್ನ ಉತ್ತರ ಕರ್ನಾಟಕದ ರೈತರು ಮನರಂಜನೆ ಹಬ್ಬವಾಗಿ ಆಚರಿಸಿಕೊಂಡು ಬರ್ತಿದ್ದಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು, ಕರಾವಳಿ ಭಾಗದಲ್ಲಿ ಕೋಣಗಳ ಕಂಬಳದ ರೀತಿಯಲ್ಲಿಯೇ ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬ, ಹಟ್ಟಿ ಹಬ್ಬ ಭಾರೀ ಫೇಮಸ್.

ಇದನ್ನೂ ವೀಕ್ಷಿಸಿ: ಲಂಬಾಣಿ ತಾಂಡಾಗಳಲ್ಲಿ ವಿಭಿನ್ನ ದೀಪಾವಳಿ ಆಚರಣೆ: ಎಮ್ಮೆಗಳನ್ನು ಅಲಂಕರಿಸಿ, ಗಲ್ಲಿಗಲ್ಲಿಯಲ್ಲಿ ಓಡಿಸಿ ಸಂಭ್ರಮ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more