ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

Published : Nov 14, 2023, 11:27 AM IST

ದೇಶಾದ್ಯಂತ ದೀಪಾವಳಿ ಸಂಭ್ರಮ ಸಡಗರ ಜೋರಾಗಿದೆ. ವಿವಿಧ ಸಂಪ್ರದಾಯಗಳ ರಾಜ್ಯ, ಜಿಲ್ಲಾವಾರು ಜನರು ಆಚರಣೆ ಮಾಡ್ತಾರೆ.. ಹಾವೇರಿ ಜಿಲ್ಲೆಯಲ್ಲಿ ನಡೆಯೋ ದೀಪಾವಳಿ ಅಪ್ಪಟ ರೈತಾಪಿ ದೀಪಾವಳಿ ಎಲ್ಲೆಡೆ ಮನಸೂರೆಗೊಳಿಸಿದೆ. 
 

ಹಾವೇರಿ ಜಿಲ್ಲೆ ಉತ್ತರ ಕರ್ನಾಟಕದ ಹೆಬ್ಬಾಗಿಲು. ಅಪ್ಪಟ  ಜವಾರಿ ರೈತರ ಜಿಲ್ಲೆ ಹಾವೇರಿ(Haveri). ಇಲ್ಲಿ ಎತ್ತು ಅಥವಾ ಹೋರಿಗಳು ಅಂದರೆ ಬರೀ ಕೃಷಿ ಕೆಲಸಕ್ಕಲ್ಲದೇ ದೀಪಾವಳಿ(Deepavali) ಹಬ್ಬದಲ್ಲೂ ಕೊಬ್ಬರಿ ಹೋರಿ ಓಡಿಸುವ ಸ್ಫರ್ಧೆ(Bull Race) ಮಾಡಿ ಸಂಭ್ರಮಿಸ್ತಾರೆ. ದೀಪಾವಳಿ ಹಾವೇರಿ ಜಿಲ್ಲೆಯಲ್ಲಿ ಪಟಾಕಿ ಹೊಡೆದು ಸಿಹಿ ತಿನ್ನೋ ಹಬ್ಬ ಅಲ್ಲವೇ ಅಲ್ಲ. ಅದು ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ. ಹಾವೇರಿ ಜಿಲ್ಲೆ ಹೋರಿ ಬೆದರಿಸೋ ಸ್ಪರ್ಧೆಗೆ ಹೆಸರುವಾಸಿ. ಹಾವೇರಿ ಜಿಲ್ಲೆಯ ಕಬ್ಬೂರು, ಕುಳೇನೂರು, ಹೊಸೂರು, ಹಾನಗಲ್, ಹಿರೇನಿಂಗದಹಳ್ಳಿ,  ಹುಲಗಿನಕೊಪ್ಪ, ಮಾರನಬೀಡ, ಚಿಕ್ಕನಿಂಗದಹಳ್ಳಿ ಸೇರಿದಂತೆ ಹಲವು ಕಡೆ ಹೋರಿ ಬೆದರಿಸೋ ಸ್ಪರ್ಧೆ ನಡೆಯುತ್ತೆ. ರೈತರು ಕಷ್ಟಪಟ್ಟು ಸಾಕಿ ಹೋರಿಗಳನ್ನ ಹಬ್ಬಕ್ಕಾಗಿ ತಯಾರು ಮಾಡಿರ್ತಾರೆ. ಭಿನ್ನ-ವಿಭಿನ್ನವಾಗಿ ಹೋರಿಗಳನ್ನ ಅಲಂಕಾರ ಮಾಡಿ ಸ್ಪರ್ಧೆಯಲ್ಲಿ  ಓಡಿಸ್ತಾರೆ.ಕೆಲವೊಂದು ಬಾರಿ ಡೇಂಜರ್ ಅನ್ನಿಸೋ ಕೊಬ್ಬರಿ ಹೋರಿ ಸ್ಪರ್ಧೆಯನ್ನ ಉತ್ತರ ಕರ್ನಾಟಕದ ರೈತರು ಮನರಂಜನೆ ಹಬ್ಬವಾಗಿ ಆಚರಿಸಿಕೊಂಡು ಬರ್ತಿದ್ದಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು, ಕರಾವಳಿ ಭಾಗದಲ್ಲಿ ಕೋಣಗಳ ಕಂಬಳದ ರೀತಿಯಲ್ಲಿಯೇ ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬ, ಹಟ್ಟಿ ಹಬ್ಬ ಭಾರೀ ಫೇಮಸ್.

ಇದನ್ನೂ ವೀಕ್ಷಿಸಿ: ಲಂಬಾಣಿ ತಾಂಡಾಗಳಲ್ಲಿ ವಿಭಿನ್ನ ದೀಪಾವಳಿ ಆಚರಣೆ: ಎಮ್ಮೆಗಳನ್ನು ಅಲಂಕರಿಸಿ, ಗಲ್ಲಿಗಲ್ಲಿಯಲ್ಲಿ ಓಡಿಸಿ ಸಂಭ್ರಮ

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more