Chikkamagaluru: ಆಧುನಿಕತೆಯ ಭರಾಟೆ ನಡುವೆಯೂ ಜೋಡೆತ್ತಿನ ಗಾಡಿ ಸ್ಪರ್ಧೆ

Chikkamagaluru: ಆಧುನಿಕತೆಯ ಭರಾಟೆ ನಡುವೆಯೂ ಜೋಡೆತ್ತಿನ ಗಾಡಿ ಸ್ಪರ್ಧೆ

Published : Apr 16, 2022, 12:29 PM IST

*  ಚಿಕ್ಕಮಗಳೂರಿನ ತೇಗೂರು ಗ್ರಾಮದಲ್ಲಿ ನಡೆದ ಎತ್ತಿನಗಾಡಿ ಸ್ಪರ್ಧೆ
*  ಯುಗಾದಿ, ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮ
*  ರಾಜ್ಯದ ನಾನಾ ಭಾಗದಿಂದ ಆಗಮಿಸಿದ್ದ 300ಕ್ಕೂ ಅಧಿಕ ಜೋಡೆತ್ತುಗಳು
 

ಚಿಕ್ಕಮಗಳೂರು(ಏ.16):  ಇತ್ತೀಚೆಗೆ ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಅದ್ರಲ್ಲೂ ಹಳ್ಳಿಗಳು ನಿಧಾನವಾಗಿ ಆಧುನಿಕರಣದತ್ತ ಮುಖಮಾಡುತ್ತಿದ್ದಂತೆ ರೈತರು ಪಾಲ್ಗೊಳ್ಳುತ್ತಿದ್ದ ಅದೆಷ್ಟೋ ಹಳ್ಳಿ ಸೊಗಡಿನ ಕ್ರೀಡೆಗಳು ಮಾಯವಾಗಿವೆ. ಗ್ರಾಮೀಣ ಕ್ರೀಡೆಯನ್ನ ಉತ್ತೇಜಿಸುವ ನಿಟ್ಟಿನಲ್ಲಿ ವರ್ಷಪೂರ್ತಿ ಹೊಲ ಗದ್ದೆಗಳಲ್ಲಿನ ಉಳುಮೆ ಕಾರ್ಯಗಳೆಲ್ಲ ಮುಗಿದ ನಿಮಿತ್ತ ಚಿಕ್ಕಮಗಳೂರಿನಲ್ಲಿ ಎತ್ತುಗಳಿಗಾಗಿಯೇ ಎತ್ತಿನಗಾಡಿಗಳ ಸ್ಪರ್ಧೆ ಏರ್ಪಡಿಸಲಾಗಿತ್ತು. ರಾಜ್ಯ ಮೂಲೆಮೂಲೆಗಳಿಂದ ಬಂದು ಯುದ್ಧಕ್ಕೆ ಸನ್ನದ್ದರಾದಂತಿದ್ದ ಎತ್ತುಗಳು ನೋಡುಗರ ಗಮನಸೆಳೆದಿವೆ.

ರಾಸುಗಳಿಗಾಗೇ ಚಿಕ್ಕಮಗಳೂರಿನ ತೇಗೂರಿನಲ್ಲಿ ಜೋಡೆತ್ತಿನ ಗಾಡಿ ಸ್ಪರ್ಧೆಯನ್ನ ಏರ್ಪಡಿಸಿದ್ರು. ಜೋಡೆತ್ತಿನಗಾಡಿ ಸ್ಪರ್ಧೆಯೂ ಯುಗಾದಿ ಹಬ್ಬ ಹಾಗೂ ಹನುಮ ಜಯಂತಿ ಅಂಗವಾಗಿ ನಡೆಯಿತು. ಅರಸು ಗೆಳೆಯರ ಬಳಗ ನಡೆಸ್ತಿರೋ ಈ ಸ್ಪರ್ಧೆಗೆ ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ ಸೇರಿ ರಾಜ್ಯದ ನಾನಾ ಭಾಗದಿಂದ 300ಕ್ಕೂ ಅಧಿಕ ಜೋಡೆತ್ತುಗಳು ಆಗಮಿಸಿದ್ದವು. ಗ್ರಾಮೀಣ ಕ್ರೀಡೆಯನ್ನ ಉತ್ತೇಜಿಸೋ ಸಲುವಾಗಿ ಇಲ್ಲಿ ಗೆದ್ದ ರಾಸುಗಳಿಗೆ ಆಕರ್ಷಕ ಬಹುಮಾನವನ್ನು ನೀಡ್ತಾರೆ. ಗ್ರಾಮೀಣ ಕ್ರೀಡೆಗಳು ನಶಿಸ್ತಿವೆ ಅನ್ನೋ ಕೂಗು ಚಿಕ್ಕಮಗಳೂರಿಗೆ ಅನ್ವಯವಾಗುವುದಿಲ್ಲ, ಯಾಕಂದ್ರೆ, ಇಲ್ಲಿ ಆಗಿಂದಾಗ್ಗೆ ಇಂತಹಾ ಗ್ರಾಮೀಣ ಕ್ರೀಡೆಗಳು ನಡೆಯುತ್ತಲೇ ಇರುತ್ತವೆ. 

ಈಶ್ವರಪ್ಪ ಬಂಧನ ಆಗ್ರಹಿಸಿ ಕಾಂಗ್ರೆಸ್‌ ರಾಜ್ಯವ್ಯಾಪಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಡಿಕೆಶಿ ನೇತೃತ್ವ!

ಜನರತ್ತ ನುಗ್ಗಿ ಬರೋ ಎತ್ತಿನ ಗಾಡಿಗಳಿಂದ ತಪ್ಪಿಸಿಕೊಳೋದು ಪ್ರೇಕ್ಷಕರಿಗೆ ಹರಸಾಹಸವೇ ಸರಿ. ಇನ್ನು ರೈತರು ಸ್ಪರ್ಧೆಗಾಗಿಯೇ ಎತ್ತುಗಳನ್ನ ಮೀಸಲಿಡ್ತಾರೆ. ಕೆಲ ರೈತರು ಹೊಲ ಗದ್ದೆಗಳಲ್ಲಿನ ಕೆಲಸ ಮುಗಿದ ಮೇಲೆ ಇಂತಹ ಆಟೋಟಗಳಲ್ಲಿ ತಮ್ಮ ರಾಸುಗಳನ್ನ ಓಡಿಸಿ ಖುಷಿ ಪಡ್ತಾರೆ. ಕೆಲವರು ಇಂತಹ ಸ್ಪರ್ಧೆಗಳಿಗಾಗಿಯೇ ರಾಸುಗಳನ್ನ ಸಾಕ್ತಾರೆ. ಸ್ಪರ್ಧೆಯ ಹದಿನೈದು ದಿನ ಮುಂಚಿತವಾಗಿಯೇ ಎತ್ತುಗಳಿಗೆ ವಿಶೇಷ ತರಬೇತಿ ಜೊತೆ ತಯಾರಿಯನ್ನೂ ಮಾಡ್ತಾರೆ. ಪ್ರತಿ ದಿನ ವಾಕ್ ಮಾಡಿಸುತ್ತಾರೆ. ದಿನಕ್ಕೆರಡು ಬಾರಿ ಈಜು ಹೊಡೆಸುತ್ತಾರೆ. ಇಂಡಿ, ಬೂಸಾ, ಹಸಿ ಹುಲ್ಲು, ರಾಗಿ ಹುಲ್ಲು, ಮೆಕ್ಕೆಜೋಳದ ಜೊತೆ ಮೊಟ್ಟೆ ಹಾಗೂ ಮೆಂತೆ ಮುದ್ದೆಯನ್ನೂ ನೀಡ್ತಾರೆ. ಸ್ಪರ್ಧೆಯಲ್ಲಿ ಪ್ರಶಸ್ತಿ ಗೆಲ್ಲೊದ್ಕಿಂತ ಭಾಗವಹಿಸೋದೆ ರೈತರಿಗೆ ಸಂತಸ. ಮಲೆನಾಡಿನಲ್ಲಿ ಅಪರೂಪವೆನಿಸಿದ್ದ ಈ ಜೋಡೆತ್ತಿನಗಾಡಿ ಸ್ಪರ್ಧೆಯನ್ನ ಎಂಟತ್ತು ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ರು. ಸ್ಪರ್ಧೆಯನ್ನ ನೋಡಿದ ರೈತರು ಇಂತಹಾ ಕ್ರೀಡೆಗಳು ನಿರತಂರವಾಗಿರಲೆಂದು ಹಾರೈಸಿದ್ರು.

ಒಟ್ಟಾರೆ, ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಕ್ರೀಡೆಗಳು ನಶಿಸ್ತಿರೋ ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರಿನ ತೇಗೂರಿನಲ್ಲಿ ನಡೆದ ಈ ಸ್ಪರ್ಧೆ ಜನಮನ ಸೆಳೆಯಿತು. ಇಂತಹ ಕಾರ್ಯಕ್ರಮಗಳ ನೆಪದಲ್ಲಾದರೂ ಗ್ರಾಮೀಣ ಕ್ರೀಡೆಗಳು ಉಳಿಯಲಿ, ಬೆಳೆಯಲಿ ಅನ್ನೋದು ನಮ್ಮ ಆಶಯ.
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!