ವಿಜಯನಗರ ಜಿಲ್ಲೆ ರಚನೆ: ರೆಡ್ಡಿ ಹೇಳಿದಂತೆ ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ

Nov 19, 2020, 10:37 PM IST

ಬಳ್ಳಾರಿ, (ನ.19): ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ ಬಳ್ಳಾರಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. 

ಯಡಿಯೂರಪ್ಪಗೆ ಬಹಿರಂಗ ಎಚ್ಚರಿಕೆ ಕೊಟ್ಟ ಬಿಜೆಪಿ ಶಾಸಕ..!

ಅಲ್ಲದೇ ಬಳ್ಳಾರಿಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ಮುಂದಾಗಿರುವುದಕ್ಕೆ ಸ್ವತಃ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೋರಾಟದ ಎಚ್ಚರಿಕೆ ನೀಡಿದ್ದರು. ಅದರಂತೆ ಇದೇ ನವೆಂಬರ್ 26ಕ್ಕೆ ಬಳ್ಳಾರಿ ಬಂದ್‌ಗೆ ಸಂಘಟನೆಗಳು ಕರೆ ಕೊಟ್ಟಿವೆ.