ಒಂಟಿಯಾಗಿ ಹೋರಾಡಿ ಜೀವತೆತ್ತ ಅರ್ಜುನ: ಕಾಡಾನೆ ಕಾರ್ಯಾಚರಣೆ ವೇಳೆ ಹಂಟರ್ ಸ್ಪೆಷಲಿಸ್ಟ್ ಸಾವು !

ಒಂಟಿಯಾಗಿ ಹೋರಾಡಿ ಜೀವತೆತ್ತ ಅರ್ಜುನ: ಕಾಡಾನೆ ಕಾರ್ಯಾಚರಣೆ ವೇಳೆ ಹಂಟರ್ ಸ್ಪೆಷಲಿಸ್ಟ್ ಸಾವು !

Published : Dec 05, 2023, 09:52 AM ISTUpdated : Dec 05, 2023, 10:19 AM IST

ಕಾಡಾನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಬಲು ಚಾಣಾಕ್ಷ, ಬರೋಬ್ಬರಿ ಎಂಟು ಬಾರಿ ಮೈಸೂರು ದಸರೆಯಲ್ಲಿ ಚಿನ್ನದ ಅಂಬಾರಿಗೆ ಹೆಗಲಾಗುವ ಮೂಲಕ ವಿಶೇಷ ದಾಖಲೆ ಬರೆದಿದ್ದ, ಅಪಾರ ಮಂದಿಯ ಪ್ರೀತಿ ಪಾತ್ರನಾಗಿದ್ದ ಕ್ಯಾಪ್ಟನ್ ಅರ್ಜುನ ದುರಂತ ಸಾವಿಗೀಡಾಗಿದೆ. 

ಗತ್ತು ಗಾಂಭೀರ್ಯದ ಮೂಲಕ ರಾಜ್ಯದ ಜನ ಮನ ಗೆದ್ದಿದ್ದವನು ಅರ್ಜುನ. ಕಾಡುಪ್ರಾಣಿಗಳ ಆಪರೇಷನ್ ಅಂದ್ರೆ ಅಲ್ಲಿ ಅರ್ಜುನ ಕ್ಯಾಪ್ಟನ್ (Captain Arjuna) ಹಾಜರ್. ಬರೋಬ್ಬರಿ ಎಂಟು ಬಾರಿ ಚಾಮುಂಡಿ ಚಿನ್ನದ ಅಂಬಾರಿ ಹೊತ್ತು ಲಕ್ಷ ಲಕ್ಷ ಜನರ ಬಾಯಲ್ಲಿ ಅರ್ಜುನ ಹೆಸರು ಒತ್ತಿದ್ದ. ಆದರೆ ಈ ಅರ್ಜುನ ಆನೆ ಹಾಸನ(Hassan) ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬಾಳೆಕೆರೆ, ದಬ್ಬಳ್ಳಿ ಫಾರೆಸ್ಟ್‌ನಲ್ಲಿ ಮೃತಪಟ್ಟಿದೆ. ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಬಲಿಷ್ಟ ಕಾಡಾನೆ ಕಾಳಗ ನಡೆಸಿ ಬಲಿ ಪಡೆದಿದೆ. ನವೆಂಬರ್ 24ರಿಂದ ಪುಂಡಾನೆ ಸೆರೆ ಮತ್ತು ಸ್ಥಳಾಂತರ ಹಾಗೂ ರೇಡಿಯೋ ಕಾಲರ್ ಅಳವಡಿಕೆ ಕಾರ್ಯ ಶುರುವಾಗಿತ್ತು. ಯಸಳೂರು ಭಾಗದಲ್ಲಿ ಆಪರೇಷನ್ ಮುಂದುವರಿದಿತ್ತು. ಕ್ಯಾಪ್ಟನ್ ಅರ್ಜುನನ ಜೊತೆಗೆ ಉಳಿದ ಮೂರು ಪಳಗಿದ ಆನೆಗಳು ತೆರಳಿದ್ದವು. ಈ ವೇಳೆ ಬಲಿಷ್ಠ ಸಲಗನಿಗೆ ಅರವಳಿಕೆ ಚುಚ್ಚುಮದ್ದು ನೀಡುವ ವೇಳೆ ಏಕಾಏಕಿ ಪಳಗಿದ ಆನೆಗಳ(Elephant) ಮೇಲೆಯೇ ತಿರುಗಿ ಬಿದ್ದಿದೆ. ಕೂಡಲೇ ಅರ್ಜುನನ ಜೊತೆಯಲ್ಲಿದ್ದ ಮೂರು ಆನೆ ಹಿಂದಕ್ಕೆ ಬಂದ ಕಾರಣ ಪುಂಡಾನೆಯನ್ನು ಹಿಮ್ಮೆಟ್ಟಿಸುವ ಪ್ರಯತ್ನ ಫಲ ನೀಡಲಿಲ್ಲ. ಕಡೆಗೆ ಅರ್ಜುನ ಎದೆಗುಂದದೆ ಹೋರಾಟಕ್ಕೆ ಇಳಿದ. ಅರ್ಜುನ ಮೇಲೆ ಕುಳಿತಿದ್ದ ವೈದ್ಯರು ಹಾಗೂ ಮಾವುತ ವಿನು ಸಹ ಜೀವ ಭಯದಿಂದ ಕೆಳಕ್ಕೆ ಧುಮುಕಿ ಜೀವ ಉಳಿಸಿಕೊಂಡಿದ್ದಾರೆ. ನಂತರ ಅರ್ಜುನನ ಸಾವಿಗೆ ಸುದ್ದಿ ಕೇಳಿ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ ವಿನು ಅಲಿಯಾಸ್ ವಿನೋದ್‌ನನ್ನು ಸ್ಥಳದಲ್ಲೇ ಇದ್ದ ಆಂಬ್ಯುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಯಿತು. ಏಕಾಂಗಿಯಾಗಿ ಅರ್ಜುನ ಕಾದಾಡುವಾಗಲೇ ದಢೂತಿ ಗಾತ್ರದ ಪುಂಡಾನೆ, ಅರ್ಜುನನ ಕಿಬ್ಬೊಟ್ಟೆಗೆ ಹರಿತವಾದ ಕೋರೆಯಿಂದ ಬಲವಾಗಿ ತಿವಿದಿದೆ. ಕೂಡಲೇ ಕುಸಿದು ಬಿದ್ದ ಅರ್ಜುನ, ತೀವ್ರ ರಕ್ತಸ್ರಾವದಿಂದ ಕೆಲ ಹೊತ್ತಿನಲ್ಲೇ ಪ್ರಾಣ ಬಿಟ್ಟಿದೆ.

ಇದನ್ನೂ ವೀಕ್ಷಿಸಿ:  ಹಾಸ್ಟೆಲ್ ಸಮಸ್ಯೆಗಳ ವಿರುದ್ಧ ಸಿಡಿದೆದ್ದ ಸ್ಟೂಡೆಂಟ್ಸ್‌: ನೀರಿಗಾಗಿ ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more