ಕೆಮಿಕಲ್ ಎಂಜಿನಿಯರಿಂಗ್ ಬಿಟ್ಟು ಯೋಧರಾಗಿದ್ದು ಯಾಕೆ..? 23 ಕಿಮೀ ಅಂತಿಮಯಾತ್ರೆ..ಎಲ್ಲೆಲ್ಲೂ ಜನಸಾಗರ..!

ಕೆಮಿಕಲ್ ಎಂಜಿನಿಯರಿಂಗ್ ಬಿಟ್ಟು ಯೋಧರಾಗಿದ್ದು ಯಾಕೆ..? 23 ಕಿಮೀ ಅಂತಿಮಯಾತ್ರೆ..ಎಲ್ಲೆಲ್ಲೂ ಜನಸಾಗರ..!

Published : Nov 26, 2023, 08:36 AM IST

ಪಂಚಭೂತಗಳಲ್ಲಿ ಲೀನರಾದ ವೀರ ಕನ್ನಡಿಗ ಪ್ರಾಂಜಲ್ 
ವೀರ ಯೋಧನಿಗಾಗಿ ಕಂಬನಿ ಮಿಡಿದ ಕರುನಾಡು..!
ಸರ್ಕಾರಿ ಗೌರವದೊಂದಿಗೆ ಪ್ರಾಂಜಲ್ ಅಂತ್ಯಕ್ರಿಯೆ..!

ಜಮ್ಮು-ಕಾಶ್ಮೀರದ (Jammu and Kashmir) ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌(Captain Pranjal) ಅವ್ರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಕ್ಯಾಪ್ಟನ್‌ ಪ್ರಾಂಜಲ್‌ ಅವ್ರ ಅಂತ್ಯಕ್ರಿಯೆ(Funeral) ಸೋಮಸುಂದರ ಪಾಳ್ಯ ಚಿತಾಗಾರದಲ್ಲಿ ನಡೆದಿದ್ದು, ಈ ಮೂಲಕ ಭಾರತಾಂಬೆಯ ಹೆಮ್ಮೆಯ ಪುತ್ರನಿಗೆ ಭಾವುಕ ವಿಧಾಯ ನೀಡಲಾಯಿತು. ಸಿಇಟಿ ಸೀಟ್ ಸಿಕ್ಕಿ ಕೆಮಿಕಲ್ ಎಂಜಿನಿಯರಿಂಗ್ ಕೋರ್ಸ್ ಮಾಡ್ತಿದ್ದ ಪ್ರಾಂಜಲ್, ಅದನ್ನು ಅರ್ಧಕ್ಕೆ ಬಿಟ್ಟು ಸೈನ್ಯಕ್ಕೆ ಸೇರಿದರು. ಕ್ಯಾಪ್ಟನ್ ಪ್ರಾಂಜಲ್. ದೇಶಸೇವೆಗೆ ಬದುಕು ಮುಡಿಪಿಟ್ಟಿದ್ದ ಕರ್ನಾಟಕದ(Karnataka) ವೀರಯೋಧ. ದೇಶದ ಭದ್ರೆತೆಗೆ ಅಪಾಯ ತರಲು ಸಂಚು ಹೂಡಿದ್ದ ಉಗ್ರರ ಜೊತೆಗೆ ಕಾಳಗ ನಡೆಸುತ್ತಲೇ ಜೀವ ಬಲಿದಾನ ನೀಡಿದ ಪರಾಕ್ರಮಿ. ಉಸಿರಿನ ಕೊನೆ ಕ್ಷಣದವರೆಗೂ ದೇಶಸೇವೆಗೈದ ಪ್ರಾಂಜಲ್ ಅಂತ್ಯ ಸಂಸ್ಕಾರವನ್ನು ಸೋಮಸುಂದರಪಾಳ್ಯ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ನಂದನವನ ಬಡಾವಣೆಯಿಂದ 22 ಕಿಲೋಮೀಟರ್ ಅಂತಿಮಯಾತ್ರೆ ನಡೆಸಿ ಸೋಮಸುಂದರಪಾಳ್ಯ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಪ್ರಾಂಜಲ್ ಅಂತ್ರ ಸಂಸ್ಕಾರವನ್ನ ನೆರೆವೇರಿಸಲಾಯ್ತು. ರಕ್ತಪಿಪಾಸುಗಳ ಹುಟ್ಟಡಗಿಸಲು ರಜೌರಿಯಲ್ಲಿ ಕಾರ್ಯಾಚರಣೆಗಿಳಿದ ಭಾರತದ ಐವರು ಯೋಧರು ಉಗ್ರರ ಗುಂಡಿಗೆ ಉಸಿರು ಚೆಲ್ಲಿದ್ದಾರೆ. ದೇಶದ ರಕ್ಷಣೆಗಾಗಿ ಪ್ರಾಣವನ್ನೇ ಬಲಿದಾನ ಮಾಡಿದ ವೀರ ಯೋಧರಿಗೆ ಶನಿವಾರವೇ ಜಮ್ಮುವಿನಲ್ಲಿ ಗೌರವ ನಮನ ಸಲ್ಲಿಸಲಾಯ್ತು. ರಜೌರಿಯಲ್ಲಿ ಉಗ್ರರ ಜೊತೆಗಿನ ಕಾಳಗದಲ್ಲಿ ಕರ್ನಾಟಕದ ವೀರ ಯೋಧ ಕೂಡ ಹುತಾತ್ಮರಾಗಿದ್ದಾರೆ. ಕ್ಯಾಪ್ಟನ್ ಪ್ರಾಂಜಲ್ ಪಾರ್ಥಿವ ಶನಿವಾರ ತವರಿಗೆ ಆಗಮಿಸಿದೆ. ಜಮ್ಮುವಿನಿಂದ ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ಪ್ರಾಂಜಲ್ ಪಾರ್ಥಿವ ತರಲಾಯ್ತು. ಹೆಚ್ಎಎಲ್ ಏರ್ಪೋರ್ಟ್‌ಗೆ ಬಂದ ಪ್ರಾಂಜಲ್ ಪಾರ್ಥಿವ ಕಂಡು ಪೋಷಕರು ಹಾಗೂ ಕುಟುಂಬಸ್ಥರು ಕಣ್ಣೀರಿಟ್ಟರು. ಅಗಲಿದ ಮಗನನ್ನ ನೆನೆದು ಹೆತ್ತೊಡಲು ಶೋಕ ಸಾಗರದಲ್ಲಿ ಮುಳುಗಿತು.

ಇದನ್ನೂ ವೀಕ್ಷಿಸಿ:  ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗಾಗಿ ಕಂಬನಿ ಮಿಡಿದ ಕರುನಾಡು!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more