ಬಿಜೆಪಿ ಕೈಗೆ ಅಸ್ತ್ರ ಕೊಟ್ಟರಾ ಕಾಂಗ್ರೆಸ್‌ ನಾಯಕರು..? ತನಿಖೆಗೆ ವಹಿಸಿದ್ದು ರಾಜಕೀಯ ದ್ವೇಷ ಎಂದ ಕಾಂಗ್ರೆಸ್..!

ಬಿಜೆಪಿ ಕೈಗೆ ಅಸ್ತ್ರ ಕೊಟ್ಟರಾ ಕಾಂಗ್ರೆಸ್‌ ನಾಯಕರು..? ತನಿಖೆಗೆ ವಹಿಸಿದ್ದು ರಾಜಕೀಯ ದ್ವೇಷ ಎಂದ ಕಾಂಗ್ರೆಸ್..!

Published : Nov 25, 2023, 03:41 PM IST

ಸಿದ್ದರಾಮಯ್ಯ ಮೇಲಿತ್ತಾ ಮೇಲಿನವರ ಒತ್ತಡ..?
ಕೇಸ್ ಹಿಂಪಡೆದಿದ್ದಕ್ಕೆ ಕಾನೂನು ಹೇಳೋದೇನು..?
ಸಿಬಿಐ ತನಿಖೆಗೆ ಸರ್ಕಾರದಿಂದ ರೆಡ್ ಸಿಗ್ನಲ್..!

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಅವರ ಮೇಲೆ ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿರೋ ದೊಡ್ಡ ಆರೋಪವಿದೆ. ಇದೇ ವಿಚಾರಕ್ಕೆ ಅವರು ತಿಹಾರ್ ಜೈಲು ವಾಸವನ್ನೂ ಅನುಭವಿಸಿದ್ದಾರೆ. ಹಿಂದೆ ಬಿಜೆಪಿ(BJP) ಸರ್ಕಾರವಿದ್ದಾಗ ಅವರ ಮೇಲಿನ ಆರೋಪದ ತನಿಖೆ ಮಾಡೋಕೆ ಸಿಬಿಐಗೆ (CBI) ಆದೇಶ ನೀಡಿತ್ತು. ಈಗ ಆ ಆದೇಶವನ್ನ ಸಿದ್ದು ಸರ್ಕಾರ ವಾಪಸ್ ಪಡೆದಿರೋದು ಚರ್ಚೆಗೆ ಗ್ರಾಸವಾಗಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನ ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಸಿಬಿಐ ಕೂಡ ತನಿಖೆ ಶುರು ಮಾಡಿತ್ತು. 90 ಪರ್ಸಂಟ್ ತನಿಖೆಯೂ ಮುಗಿದಿತ್ತು. ಆದ್ರೆ ಈಗ ಸಿದ್ದು ಸರ್ಕಾರ ಸಿಬಿಐ ತನಿಖೆಗೆ ರೆಡ್ ಸಿಗ್ನಲ್ ಕೊಟ್ಟಿದೆ. ಈ ಮೂಲಕ ಡಿಕೆ ಶಿವಕುಮಾರ್ ಅವರನ್ನ ಕಾಪಾಡೋಕೆ ಮುಂದಾಗಿದೆ. ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಈಗ ರಾಜ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡ್ತಾ ಇದೆ. ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆಯಲು ಸರ್ಕಾರ ನಿರ್ಧಾರಕ್ಕೆ ಬಂದಿದೆ. ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಸರ್ಕಾರ ಸಿಬಿಐ ತನಿಖೆಯನ್ನ ಹಿಂಪಡೆದಿದೆ. ಡಿಕೆಶಿ ಮೇಲೆ ಬಿಜೆಪಿಯವರು ಹಾಕಿದ್ದ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು ಅನ್ನೋದು ಸಂಪುಟ ಸದಸ್ಯರ ವಾದ. ಈ ಪ್ರಕರಣವನ್ನ ಹಿಂಪಡೆಯೋಕೆ ಸುಮಾರು 35 ನಿಮಿಷ ಚರ್ಚೆಯೂ ಆಗಿದೆ. ಆ ಬಳಿಕ ಕ್ಯಾಬಿನೆಟ್ನಲ್ಲಿ ನಿರ್ಣಯಕ್ಕೆ ಬರಲಾಗಿದೆ. ಹಿಂದಿನ ಸರ್ಕಾರ ನಿಯಮ ಬಾಹಿರವಾಗಿ ಆದೇಶ ಮಾಡಿತ್ತು. ಶಾಸಕರಾಗಿದ್ದ ಡಿಕೆ ಶಿವಕುಮಾರ್ ಮೇಲೆ ತನಿಖೆಗೆ ಆದೇಶ ಕೊಡೋಕೆ ಸಭಾಪತಿಗಳ ಅನುಮತಿ ಪಡದೇ ಇರ್ಲಿಲ್ಲಾ. ಮೌಕಿಕ ಆದೇಶಕ್ಕೆ ಯಾವುದೇ ಬೆಲೆಯಿಲ್ಲ. ಬರವಣಿಗೆಯಲ್ಲಿ ಆದೇಶವೂ ಇಲ್ಲ.ಹೀಗಾಗಿ ನಿಯಮಗಳನ್ನ ಗಾಳಿಗೆ ತೂರಿ ಡಿಕೆಶಿ ಮೇಲೆ ರಾಜಕೀಯ ದ್ವೇಷ ಸಾಧಿಸೋಕೆ ಬಿಜೆಪಿಗರು ಹೋಗಿದ್ದರು. ನಿಯಮ ಬಾಹಿರವಾಗಿ ಅನುಮತಿ ಕೊಟ್ಟಿದ್ದಾರೆ ಎಂಬ ಕಾರಣಕ್ಕೆ ಸಿಬಿಐ ತನಿಖೆಯನ್ನ ವಾಪಸ್ ಪಡೆಯಲಾಗಿದೆ ಅನ್ನೋದು ಕಾಂಗ್ರೆಸ್(Congress) ವಾದವಾಗಿದೆ.

ಇದನ್ನೂ ವೀಕ್ಷಿಸಿ:  ಓದಿದ್ದು SSLC..ಗಳಿಸಿದ್ದು ಕೋಟಿ ಕೋಟಿ..! ಮೋಸಗಾರ ಸುಕೇಶ್ ತಗಲಾಕಿಕೊಂಡಿದ್ದು ಹೇಗೆ..?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more