ಕೇರಳದ ಜೈ ಹಿಂದ್ ಚಾನೆಲ್ ಮತ್ತು ಡಿಕೆಶಿ..ಏನಿದರ ಗುಟ್ಟು..? ರಾಜಕೀಯ ಷಡ್ಯಂತ್ರ ಅಂದಿದ್ದೇಕೆ ಡಿಸಿಎಂ..?

ಕೇರಳದ ಜೈ ಹಿಂದ್ ಚಾನೆಲ್ ಮತ್ತು ಡಿಕೆಶಿ..ಏನಿದರ ಗುಟ್ಟು..? ರಾಜಕೀಯ ಷಡ್ಯಂತ್ರ ಅಂದಿದ್ದೇಕೆ ಡಿಸಿಎಂ..?

Published : Jan 03, 2024, 01:00 PM IST

ಸಿಬಿಐ ಚಕ್ರವ್ಯೂಹದಲ್ಲಿ ಬಂಧಿಯಾಗ್ತಾರಾ ಕನಕಪುರದ ಬೇಟೆಗಾರ..?
ಕೇಸ್ ವಾಪಸ್ ಪಡೆದರೂ ಕನಕಾಧಿಪತಿಗೆ ತಪ್ಪಲ್ವಾ ಸಿಬಿಐ ಕಂಟಕ..?
ಡಿಕೆ ಶಿವಕುಮಾರ್‌ ಕೊರಳಿಗೆ ಉರುಳಾಗುತ್ತಾ "ಅಕ್ರಮ ಆಸ್ತಿ" ರಹಸ್ಯ..?

ರಾಜಕೀಯದಲ್ಲಿ ಅದೆಷ್ಟೋ ಚಕ್ರವ್ಯೂಹಗಳನ್ನು ಭೇದಿಸಿ ನಿಂತಿರೋ ಬೇಟೆಗಾರನಿಗೆ ಸಿಬಿಐ(CBI) ಚಕ್ರವ್ಯೂಹ. ರಣರಂಗದ ಚದುರಂಗದಲ್ಲಿ ಅತಿ ರೋಚಕ ದಾಳಗಳನ್ನು ಉರುಳಿಸಿ ಸೈ ಎನಿಸಿಕೊಂಡ ಚಾಣಾಕ್ಷನ ಮುಂದೆ ಮತ್ತದೇ ಚಕ್ರವ್ಯೂಹ. ಆ ಚಕ್ರವ್ಯೂಹದ ಮುಂದೆ ನಿಂತಿರೋ ಡಿಕೆ ಶಿವಕುಮಾರ್(DK Shivakumar), ಜೈಲಿಗೆ ಹಾಕೋದಾದ್ರೆ ಹಾಕ್ಲಿ, ರೆಡಿ ಇದ್ದೇನೆ ನಾನು ಅಂತಿದ್ದಾರೆ. ಡಿಕೆ ಶಿವಕುಮಾರ್ ಅವ್ರನ್ನು ರಾಜಕೀಯದಲ್ಲಿ ಅಂಜದ ಗಂಡು, ಎಂಟೆದೆ ಬಂಟ ಅಂತ ಕರೀತಾರೆ. ಅಂತಹ ಬಹದ್ದೂರ್ ಗಂಡೇ, ಕಂಪಿಸಿದ ಧ್ವನಿಯಲ್ಲಿ ಮಾತನಾಡ್ತಿದ್ದಾರೆ ಅಂದ್ರೆ ಅಲ್ಲೇನೋ ನಡೆದಿರ್ಲೇಬೇಕು.ಡಿಕೆ ಸಾಹೇಬನ ಕೋಟೆಯೊಳಗೆ ಮತ್ತೊಮ್ಮೆ ಬಿರುಗಾಳಿ ಎದ್ದಿದೆ. ಕನಕಪುರದ ಬೇಟೆಗಾರನನ್ನು ಬೇಟೆಯಾಡಲು ಹೊಂಚು ಹಾಕ್ತಿರೋ ಸಿಬಿಐ, ಡಿಕೆಶಿಗೆ ಮತ್ತೆ ಶಾಕ್ ಕೊಟ್ಟಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವ್ರಿಗೆ ಇಡಿ, ಐಟಿ, ಸಿಬಿಐ ಕೇಸ್'ಗಳೆಲ್ಲಾ ಹೊಸನೇತಲ್ಲ. 2017ರಲ್ಲಿ ಶುರುವಾದ ಈ ಕೇಸ್'ಗಳ ಸರಮಾಲೆ, ಬೆನ್ನು ಬಿಡದ ಬೇತಾಳನಂತೆ ಡಿಕೆಶಿಯವ್ರನ್ನ ಕಾಡ್ತಾನೇ ಇವೆ. ಆ ಕೇಸ್"ಗಳ ಕಾರಣದಿಂದ ಡಿಕೆಶಿ, ಅದೆಷ್ಟು ರಾತ್ರಿಗಳನ್ನ ನಿದ್ದೆಯಿಲ್ಲದೆ ಕಳೆದಿದ್ದಾರೋ ಗೊತ್ತಿಲ್ಲ. ಒಂದಾದ ಮೇಲೊಂದರಂತೆ ಕೇಸ್'ಗಳ ಮೇಲೆ ಕೇಸ್.. ಒಮ್ಮೆ ಐಟಿ, ಮತ್ತೊಮ್ಮೆ ಇಡಿ, ಮಗದೊಮ್ಮೆ ಸಿಬಿಐ. ಈ ಕೇಸ್"ಗಳೆಲ್ಲಾ ಡಿಕೆ ಶಿವಕುಮಾರ್ ಅವ್ರನ್ನು ಅದೆಷ್ಟರ ಮಟ್ಟಿಗೆ ಅಲುಗಾಡಿಸಿ ಬಿಟ್ಟಿವೆ ಅಂದ್ರೆ, ಯಾವುದಕ್ಕೂ ಹೆದರಲ್ಲ ಅಂತಿದ್ದ ಡಿಕೆಶಿ 2019ರಲ್ಲಿ ಕಣ್ಣೀರು ಹಾಕ್ತಾ ಜೈಲಿಗೆ ಹೋಗುವಂತಾಗಿತ್ತು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more