ಕೇರಳದ ಜೈ ಹಿಂದ್ ಚಾನೆಲ್ ಮತ್ತು ಡಿಕೆಶಿ..ಏನಿದರ ಗುಟ್ಟು..? ರಾಜಕೀಯ ಷಡ್ಯಂತ್ರ ಅಂದಿದ್ದೇಕೆ ಡಿಸಿಎಂ..?

ಕೇರಳದ ಜೈ ಹಿಂದ್ ಚಾನೆಲ್ ಮತ್ತು ಡಿಕೆಶಿ..ಏನಿದರ ಗುಟ್ಟು..? ರಾಜಕೀಯ ಷಡ್ಯಂತ್ರ ಅಂದಿದ್ದೇಕೆ ಡಿಸಿಎಂ..?

Published : Jan 03, 2024, 01:00 PM IST

ಸಿಬಿಐ ಚಕ್ರವ್ಯೂಹದಲ್ಲಿ ಬಂಧಿಯಾಗ್ತಾರಾ ಕನಕಪುರದ ಬೇಟೆಗಾರ..?
ಕೇಸ್ ವಾಪಸ್ ಪಡೆದರೂ ಕನಕಾಧಿಪತಿಗೆ ತಪ್ಪಲ್ವಾ ಸಿಬಿಐ ಕಂಟಕ..?
ಡಿಕೆ ಶಿವಕುಮಾರ್‌ ಕೊರಳಿಗೆ ಉರುಳಾಗುತ್ತಾ "ಅಕ್ರಮ ಆಸ್ತಿ" ರಹಸ್ಯ..?

ರಾಜಕೀಯದಲ್ಲಿ ಅದೆಷ್ಟೋ ಚಕ್ರವ್ಯೂಹಗಳನ್ನು ಭೇದಿಸಿ ನಿಂತಿರೋ ಬೇಟೆಗಾರನಿಗೆ ಸಿಬಿಐ(CBI) ಚಕ್ರವ್ಯೂಹ. ರಣರಂಗದ ಚದುರಂಗದಲ್ಲಿ ಅತಿ ರೋಚಕ ದಾಳಗಳನ್ನು ಉರುಳಿಸಿ ಸೈ ಎನಿಸಿಕೊಂಡ ಚಾಣಾಕ್ಷನ ಮುಂದೆ ಮತ್ತದೇ ಚಕ್ರವ್ಯೂಹ. ಆ ಚಕ್ರವ್ಯೂಹದ ಮುಂದೆ ನಿಂತಿರೋ ಡಿಕೆ ಶಿವಕುಮಾರ್(DK Shivakumar), ಜೈಲಿಗೆ ಹಾಕೋದಾದ್ರೆ ಹಾಕ್ಲಿ, ರೆಡಿ ಇದ್ದೇನೆ ನಾನು ಅಂತಿದ್ದಾರೆ. ಡಿಕೆ ಶಿವಕುಮಾರ್ ಅವ್ರನ್ನು ರಾಜಕೀಯದಲ್ಲಿ ಅಂಜದ ಗಂಡು, ಎಂಟೆದೆ ಬಂಟ ಅಂತ ಕರೀತಾರೆ. ಅಂತಹ ಬಹದ್ದೂರ್ ಗಂಡೇ, ಕಂಪಿಸಿದ ಧ್ವನಿಯಲ್ಲಿ ಮಾತನಾಡ್ತಿದ್ದಾರೆ ಅಂದ್ರೆ ಅಲ್ಲೇನೋ ನಡೆದಿರ್ಲೇಬೇಕು.ಡಿಕೆ ಸಾಹೇಬನ ಕೋಟೆಯೊಳಗೆ ಮತ್ತೊಮ್ಮೆ ಬಿರುಗಾಳಿ ಎದ್ದಿದೆ. ಕನಕಪುರದ ಬೇಟೆಗಾರನನ್ನು ಬೇಟೆಯಾಡಲು ಹೊಂಚು ಹಾಕ್ತಿರೋ ಸಿಬಿಐ, ಡಿಕೆಶಿಗೆ ಮತ್ತೆ ಶಾಕ್ ಕೊಟ್ಟಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವ್ರಿಗೆ ಇಡಿ, ಐಟಿ, ಸಿಬಿಐ ಕೇಸ್'ಗಳೆಲ್ಲಾ ಹೊಸನೇತಲ್ಲ. 2017ರಲ್ಲಿ ಶುರುವಾದ ಈ ಕೇಸ್'ಗಳ ಸರಮಾಲೆ, ಬೆನ್ನು ಬಿಡದ ಬೇತಾಳನಂತೆ ಡಿಕೆಶಿಯವ್ರನ್ನ ಕಾಡ್ತಾನೇ ಇವೆ. ಆ ಕೇಸ್"ಗಳ ಕಾರಣದಿಂದ ಡಿಕೆಶಿ, ಅದೆಷ್ಟು ರಾತ್ರಿಗಳನ್ನ ನಿದ್ದೆಯಿಲ್ಲದೆ ಕಳೆದಿದ್ದಾರೋ ಗೊತ್ತಿಲ್ಲ. ಒಂದಾದ ಮೇಲೊಂದರಂತೆ ಕೇಸ್'ಗಳ ಮೇಲೆ ಕೇಸ್.. ಒಮ್ಮೆ ಐಟಿ, ಮತ್ತೊಮ್ಮೆ ಇಡಿ, ಮಗದೊಮ್ಮೆ ಸಿಬಿಐ. ಈ ಕೇಸ್"ಗಳೆಲ್ಲಾ ಡಿಕೆ ಶಿವಕುಮಾರ್ ಅವ್ರನ್ನು ಅದೆಷ್ಟರ ಮಟ್ಟಿಗೆ ಅಲುಗಾಡಿಸಿ ಬಿಟ್ಟಿವೆ ಅಂದ್ರೆ, ಯಾವುದಕ್ಕೂ ಹೆದರಲ್ಲ ಅಂತಿದ್ದ ಡಿಕೆಶಿ 2019ರಲ್ಲಿ ಕಣ್ಣೀರು ಹಾಕ್ತಾ ಜೈಲಿಗೆ ಹೋಗುವಂತಾಗಿತ್ತು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more