ಕೇರಳದ ಜೈ ಹಿಂದ್ ಚಾನೆಲ್ ಮತ್ತು ಡಿಕೆಶಿ..ಏನಿದರ ಗುಟ್ಟು..? ರಾಜಕೀಯ ಷಡ್ಯಂತ್ರ ಅಂದಿದ್ದೇಕೆ ಡಿಸಿಎಂ..?

ಕೇರಳದ ಜೈ ಹಿಂದ್ ಚಾನೆಲ್ ಮತ್ತು ಡಿಕೆಶಿ..ಏನಿದರ ಗುಟ್ಟು..? ರಾಜಕೀಯ ಷಡ್ಯಂತ್ರ ಅಂದಿದ್ದೇಕೆ ಡಿಸಿಎಂ..?

Published : Jan 03, 2024, 01:00 PM IST

ಸಿಬಿಐ ಚಕ್ರವ್ಯೂಹದಲ್ಲಿ ಬಂಧಿಯಾಗ್ತಾರಾ ಕನಕಪುರದ ಬೇಟೆಗಾರ..?
ಕೇಸ್ ವಾಪಸ್ ಪಡೆದರೂ ಕನಕಾಧಿಪತಿಗೆ ತಪ್ಪಲ್ವಾ ಸಿಬಿಐ ಕಂಟಕ..?
ಡಿಕೆ ಶಿವಕುಮಾರ್‌ ಕೊರಳಿಗೆ ಉರುಳಾಗುತ್ತಾ "ಅಕ್ರಮ ಆಸ್ತಿ" ರಹಸ್ಯ..?

ರಾಜಕೀಯದಲ್ಲಿ ಅದೆಷ್ಟೋ ಚಕ್ರವ್ಯೂಹಗಳನ್ನು ಭೇದಿಸಿ ನಿಂತಿರೋ ಬೇಟೆಗಾರನಿಗೆ ಸಿಬಿಐ(CBI) ಚಕ್ರವ್ಯೂಹ. ರಣರಂಗದ ಚದುರಂಗದಲ್ಲಿ ಅತಿ ರೋಚಕ ದಾಳಗಳನ್ನು ಉರುಳಿಸಿ ಸೈ ಎನಿಸಿಕೊಂಡ ಚಾಣಾಕ್ಷನ ಮುಂದೆ ಮತ್ತದೇ ಚಕ್ರವ್ಯೂಹ. ಆ ಚಕ್ರವ್ಯೂಹದ ಮುಂದೆ ನಿಂತಿರೋ ಡಿಕೆ ಶಿವಕುಮಾರ್(DK Shivakumar), ಜೈಲಿಗೆ ಹಾಕೋದಾದ್ರೆ ಹಾಕ್ಲಿ, ರೆಡಿ ಇದ್ದೇನೆ ನಾನು ಅಂತಿದ್ದಾರೆ. ಡಿಕೆ ಶಿವಕುಮಾರ್ ಅವ್ರನ್ನು ರಾಜಕೀಯದಲ್ಲಿ ಅಂಜದ ಗಂಡು, ಎಂಟೆದೆ ಬಂಟ ಅಂತ ಕರೀತಾರೆ. ಅಂತಹ ಬಹದ್ದೂರ್ ಗಂಡೇ, ಕಂಪಿಸಿದ ಧ್ವನಿಯಲ್ಲಿ ಮಾತನಾಡ್ತಿದ್ದಾರೆ ಅಂದ್ರೆ ಅಲ್ಲೇನೋ ನಡೆದಿರ್ಲೇಬೇಕು.ಡಿಕೆ ಸಾಹೇಬನ ಕೋಟೆಯೊಳಗೆ ಮತ್ತೊಮ್ಮೆ ಬಿರುಗಾಳಿ ಎದ್ದಿದೆ. ಕನಕಪುರದ ಬೇಟೆಗಾರನನ್ನು ಬೇಟೆಯಾಡಲು ಹೊಂಚು ಹಾಕ್ತಿರೋ ಸಿಬಿಐ, ಡಿಕೆಶಿಗೆ ಮತ್ತೆ ಶಾಕ್ ಕೊಟ್ಟಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವ್ರಿಗೆ ಇಡಿ, ಐಟಿ, ಸಿಬಿಐ ಕೇಸ್'ಗಳೆಲ್ಲಾ ಹೊಸನೇತಲ್ಲ. 2017ರಲ್ಲಿ ಶುರುವಾದ ಈ ಕೇಸ್'ಗಳ ಸರಮಾಲೆ, ಬೆನ್ನು ಬಿಡದ ಬೇತಾಳನಂತೆ ಡಿಕೆಶಿಯವ್ರನ್ನ ಕಾಡ್ತಾನೇ ಇವೆ. ಆ ಕೇಸ್"ಗಳ ಕಾರಣದಿಂದ ಡಿಕೆಶಿ, ಅದೆಷ್ಟು ರಾತ್ರಿಗಳನ್ನ ನಿದ್ದೆಯಿಲ್ಲದೆ ಕಳೆದಿದ್ದಾರೋ ಗೊತ್ತಿಲ್ಲ. ಒಂದಾದ ಮೇಲೊಂದರಂತೆ ಕೇಸ್'ಗಳ ಮೇಲೆ ಕೇಸ್.. ಒಮ್ಮೆ ಐಟಿ, ಮತ್ತೊಮ್ಮೆ ಇಡಿ, ಮಗದೊಮ್ಮೆ ಸಿಬಿಐ. ಈ ಕೇಸ್"ಗಳೆಲ್ಲಾ ಡಿಕೆ ಶಿವಕುಮಾರ್ ಅವ್ರನ್ನು ಅದೆಷ್ಟರ ಮಟ್ಟಿಗೆ ಅಲುಗಾಡಿಸಿ ಬಿಟ್ಟಿವೆ ಅಂದ್ರೆ, ಯಾವುದಕ್ಕೂ ಹೆದರಲ್ಲ ಅಂತಿದ್ದ ಡಿಕೆಶಿ 2019ರಲ್ಲಿ ಕಣ್ಣೀರು ಹಾಕ್ತಾ ಜೈಲಿಗೆ ಹೋಗುವಂತಾಗಿತ್ತು.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್-ಬಿಜೆಪಿ ನಡುವೆ ಭುಗಿಲೆದ್ದ ‘ಕರಸೇವಕ’ ಫೈಟ್: ಹಳೇ ಕೇಸ್ ಕೆದಕುವ ಹಿಂದೆ ರಾಜಕೀಯ ಇದ್ಯಾ..?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more