ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

ಪಾಕ್‌ನ ಭಯೋತ್ಪಾದಕರಿಗೆ ಭಾರತಕ್ಕೆ ಬಂದು ಏನು ಮಾಡೋಕಾಗಲ್ಲ, ಅದಕ್ಕೆ ಇಲ್ಲಿಯೇ ಸೃಷ್ಟಿ ಮಾಡಿದ್ದಾರೆ: ಸೂಲಿಬೆಲೆ

Published : Mar 02, 2024, 11:50 AM ISTUpdated : Mar 02, 2024, 11:51 AM IST

ಬಿ.ಕೆ‌.ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ ಅಲ್ಲ ಅಂತ ಹೇಳಿದ್ದಾರೆಂದು ಹೇಳುವ ಮೂಲಕ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಯಾದಗಿರಿ: ಬೆಂಗಳೂರಿನಲ್ಲಿ ಬಹಳ ವರ್ಷಗಳ ಬಳಿಕ ಸ್ಫೋಟ ಆಗಿದ್ದು ಕೇಳಿದ್ದೇವೆ. ಮೋದಿ ಪ್ರಧಾನಿ(Narendra Modi) ಆದ ನಂತರ ದೇಶದಲ್ಲಿ ಬಾಂಬ್ ಬ್ಲಾಸ್ಟ್ ಘಟನೆಗಳು ನಡೆದಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ನಮೋ ಬ್ರಿಗೇಡ್‌ನ 'ನಮೋ ಭಾರತ' ಕಾರ್ಯಕ್ರಮದಲ್ಲಿ ಈ ರೀತಿ ಮಾತನಾಡಿದ್ದಾರೆ. ಮೋದಿ‌ ಪಾಕಿಸ್ತಾನದ ಭಯೋತ್ಪಾದಕರನ್ನು ಭಾರತದ(India) ಗಡಿಯೊಳಗೆ ಬಿಡ್ತಿಲ್ಲ. ಭಾರತದ ಮೋಸ್ಟ್ ವಾಂಟೆಡ್ ಉಗ್ರರನ್ನು ಅಲ್ಲಿಯೇ ಮುಗಿಸಿ ಬಿಡ್ತಾರೆ. ಭಾರತ ಅನಾಮಿಕ ಗನ್ ಮ್ಯಾನ್ ಪಾಕಿಸ್ತಾನದಲ್ಲೇ(Pakistan) ಮುಗಿಸಿ ಬಿಡ್ತಾರೆ. ಪಾಕಿಸ್ತಾನದ ಭಯೋತ್ಪಾದಕರು ಭಾರತಕ್ಕೆ ಬಂದು ಮಾಡೋದಕ್ಕೆ ಏನಿಲ್ಲ. ಅದಕ್ಕೆ ಅವ್ರು ಇಲ್ಲಿಯೇ ಕೆಲವು ಭಯೋತ್ಪಾದರನ್ನು ಸೃಷ್ಟಿ ಮಾಡ್ಬಿಟ್ಟಿದ್ದಾರೆ. ಅವರಿಗೆ ಸಪೋರ್ಟ್ ಮಾಡಲು ಕರ್ನಾಟಕ ಸರ್ಕಾರವಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಸಂವಿಧಾನ ರಕ್ಷಣೆ ಮಾಡುವ ಕೇಂದ್ರದಲ್ಲಿ ಘೋಷಣೆ ಕೂಗಿದ್ದಾರೆ. ಬಿ.ಕೆ‌.ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ(Congress) ಅಲ್ಲ ಅಂತ ಹೇಳಿದ್ದಾರೆ. ಅವ್ರು ಯಾವ ಲೇವಲ್ ಅಂತ ತೋರಿಸಿಬಿಟ್ರು. ಕಾಂಗ್ರೆಸ್‌ ಏನು ಮಾಡಲು ಹೊರಟಿದೆ ಅಂತ ಗೊತ್ತಾಗುತ್ತದೆ ಎಂದು ಶಹಾಪುರದಲ್ಲಿ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  RSS ಸಂಸ್ಥಾಪಕ ಡಾ.ಹೆಡಗೇವಾರ್: ಜೀವನ ಚರಿತ್ರೆ ಆಧಾರಿತ ಮ್ಯಾನ್ ಆಫ್ ದಿ ಮಿಲೇನಿಯಾ ಪುಸ್ತಕ ಬಿಡುಗಡೆ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more